AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು
ವಿಮಾನ ಪತನ (ಚಿತ್ರ: ರಾಯಿಟರ್ಸ್​)
TV9 Web
| Updated By: Lakshmi Hegde|

Updated on:Oct 10, 2021 | 9:58 AM

Share

ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane)ವೊಂದು ಅಮೇಜಾನ್​ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೇಜಾನ್​ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದ್ದಾಗಿ ಮಾಹಿತಿ ಲಭ್ಯವಾಗಿದೆ.  

ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್​​ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್​ ಕಾಡಿನ ದಟ್ಟವಾದ ಮರಗಳ ಮಧ್ಯೆ ಪತನವಾಗಿದೆ. ಕೆಳಗೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡು, ಇಡೀ ವಿಮಾನ ಬೆಂಕಿಗೆ ಆಹುತಿಯಾಗಿದೆ. ಅಲ್ಲಿಯೇ ಹತ್ತಿರದಲ್ಲಿ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ, ಸಾಧ್ಯವಾಗಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೇನಾ ವಿಮಾನ ಪತನಕ್ಕೆ ನೈಜ ಕಾರಣವೇನು ಎಂದು ಪತ್ತೆ ಹಚ್ಚುವ ಸಂಬಂಧ ತನಿಖೆ ನಡೆಯುತ್ತಿದೆ.

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ. ಅಧಿಕಾರಿಗಳ ತಂಡವನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಅವರೆಲ್ಲ ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಕೊಂಡವರಾಗಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

Published On - 9:58 am, Sun, 10 October 21

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?