AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು
ವಿಮಾನ ಪತನ (ಚಿತ್ರ: ರಾಯಿಟರ್ಸ್​)
TV9 Web
| Edited By: |

Updated on:Oct 10, 2021 | 9:58 AM

Share

ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane)ವೊಂದು ಅಮೇಜಾನ್​ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೇಜಾನ್​ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದ್ದಾಗಿ ಮಾಹಿತಿ ಲಭ್ಯವಾಗಿದೆ.  

ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್​​ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್​ ಕಾಡಿನ ದಟ್ಟವಾದ ಮರಗಳ ಮಧ್ಯೆ ಪತನವಾಗಿದೆ. ಕೆಳಗೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡು, ಇಡೀ ವಿಮಾನ ಬೆಂಕಿಗೆ ಆಹುತಿಯಾಗಿದೆ. ಅಲ್ಲಿಯೇ ಹತ್ತಿರದಲ್ಲಿ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ, ಸಾಧ್ಯವಾಗಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೇನಾ ವಿಮಾನ ಪತನಕ್ಕೆ ನೈಜ ಕಾರಣವೇನು ಎಂದು ಪತ್ತೆ ಹಚ್ಚುವ ಸಂಬಂಧ ತನಿಖೆ ನಡೆಯುತ್ತಿದೆ.

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ. ಅಧಿಕಾರಿಗಳ ತಂಡವನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಅವರೆಲ್ಲ ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಕೊಂಡವರಾಗಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

Published On - 9:58 am, Sun, 10 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ