AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​​ನ ಸಿಂಧ್​ನಲ್ಲಿ 60 ಮಂದಿ ಹಿಂದೂಗಳು ಇಸ್ಲಾಂಗೆ ಮತಾಂತರ; ಬಲವಂತವಾಗಿ ನಡೆಯುತ್ತಿದೆ ಈ ಪ್ರಕ್ರಿಯೆ

ಪಾಕಿಸ್ತಾನದ ಸಿಂಧ್​​ನಿಂದ ಹೀಗೆ ಮತಾಂತರದ ಬಗ್ಗೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಮಾರ್ಚ್​ನಲ್ಲಿ 13 ವರ್ಷದ ಬಾಲಕಿ ಕವಿತಾ ಎಂಬುವಳನ್ನು ಅಪಹರಿಸಿ, ನಂತರ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿತ್ತು.

ಪಾಕ್​​ನ ಸಿಂಧ್​ನಲ್ಲಿ 60 ಮಂದಿ ಹಿಂದೂಗಳು ಇಸ್ಲಾಂಗೆ ಮತಾಂತರ; ಬಲವಂತವಾಗಿ ನಡೆಯುತ್ತಿದೆ ಈ ಪ್ರಕ್ರಿಯೆ
ಮತಾಂತರ ಸ್ಥಳದ ಫೋಟೋ
TV9 Web
| Edited By: |

Updated on: Jul 11, 2021 | 5:36 PM

Share

ಇಸ್ಲಮಾಬಾದ್​: ಪಾಕಿಸ್ತಾನದ ಸಿಂಧ್ ಪ್ರಾಂತದ ಮಲ್ಟಿ ಎಂಬ ಪ್ರದೇಶದಲ್ಲಿ ಸುಮಾರು 60 ಮಂದಿ ಹಿಂದುಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿದೆ. ಅಲ್ಲಿನ ಮುನ್ಸಿಪಲ್​ ಅಧ್ಯಕ್ಷನ ಎದುರಿಗೇ ಈ ಮತಾಂತರ ನಡೆದಿದ್ದು, ಇವರ ಬಳಿ ಒತ್ತಾಯ ಪೂರ್ವಕವಾಗಿ ಇಸ್ಲಾಂನ ಪ್ರಮಾಣವಚನ ಓದಿಸಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಕೇವಲ 4.5 ಮಿಲಿಯನ್​​ಗಳಷ್ಟೇ ಅಂದರೆ ಪಾಕಿಸ್ತಾನದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.2ರಷ್ಟು ಮಾತ್ರ ಹಿಂದೂಗಳಿದ್ದಾರೆ. ಅದರಲ್ಲೂ ಈ ಸಿಂಧ್​ ಪ್ರಾಂತದಲ್ಲೇ ಹೆಚ್ಚು ಹಿಂದೂಗಳು ವಾಸಿಸುತ್ತಿದ್ದಾರೆ. ಇಲ್ಲಿನ ಪುರಸಭೆ ಅಧ್ಯಕ್ಷ ಅಬ್ದುಲ್​ ರವೂಫ್​ ನಿಜಾಮಾನಿಯೇ ಖುದ್ದಾಗಿ ನಿಂತು ಮತಾಂತರ ನಡೆಸುತ್ತಿರುವುದು ಗೊತ್ತಾಗಿದೆ. ಅವರು ತಮ್ಮ ಫೇಸ್​ಬುಕ್​​ನಲ್ಲಿ ಪೋಸ್ಟ್ ಹಾಕಿ, ಇವತ್ತು ನನ್ನ ನೇತೃತ್ವದಲ್ಲಿ 60 ಹಿಂದೂಗಳು ಮುಸ್ಲಿಂ ಧರ್ಮ ಸ್ವೀಕರಿಸಿದರು. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಹಾಗೇ, ಒಂದಷ್ಟು ಜನರನ್ನು ಕೂರಿಸಿಕೊಂಡು ಅವರಿಗೆ ಇಸ್ಲಾಂ ಬಗ್ಗೆ ಬೋಧಿಸುತ್ತಿರುವ ವಿಡಿಯೋ ಕೂಡ ಶೇರ್ ಮಾಡಿಕೊಂಡಿದ್ದಾರೆ.

ಪಾಕಿಸ್ತಾನದ ಸಿಂಧ್​​ನಿಂದ ಹೀಗೆ ಮತಾಂತರದ ಬಗ್ಗೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಮಾರ್ಚ್​ನಲ್ಲಿ 13 ವರ್ಷದ ಬಾಲಕಿ ಕವಿತಾ ಎಂಬುವಳನ್ನು ಅಪಹರಿಸಿ, ನಂತರ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿತ್ತು. ಆಕೆಯನ್ನು ಮಧ್ಯದಲ್ಲಿ ಕೂರಿಸಿ, ಹಲವು ಮುಸ್ಲಿಂ ಮುಖಂಡರು ಸೇರಿ ಮತಾಂತರ ಮಾಡಿದ ಪ್ರಕ್ರಿಯೆಯ ವಿಡಿಯೋ ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ: ‘ಇದರಲ್ಲಿ ಯಾರೇ ಇದ್ರೂ ಬಿಡಲ್ಲ‘; ವಂಚನೆ ಪ್ರಯತ್ನದ ಬಗ್ಗೆ ದರ್ಶನ್​ ಎಚ್ಚರಿಕೆ

60 Hindus forcibly converted to Islam in Sindh province of Pakistan

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು