AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​​ನ ಸಿಂಧ್​ನಲ್ಲಿ 60 ಮಂದಿ ಹಿಂದೂಗಳು ಇಸ್ಲಾಂಗೆ ಮತಾಂತರ; ಬಲವಂತವಾಗಿ ನಡೆಯುತ್ತಿದೆ ಈ ಪ್ರಕ್ರಿಯೆ

ಪಾಕಿಸ್ತಾನದ ಸಿಂಧ್​​ನಿಂದ ಹೀಗೆ ಮತಾಂತರದ ಬಗ್ಗೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಮಾರ್ಚ್​ನಲ್ಲಿ 13 ವರ್ಷದ ಬಾಲಕಿ ಕವಿತಾ ಎಂಬುವಳನ್ನು ಅಪಹರಿಸಿ, ನಂತರ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿತ್ತು.

ಪಾಕ್​​ನ ಸಿಂಧ್​ನಲ್ಲಿ 60 ಮಂದಿ ಹಿಂದೂಗಳು ಇಸ್ಲಾಂಗೆ ಮತಾಂತರ; ಬಲವಂತವಾಗಿ ನಡೆಯುತ್ತಿದೆ ಈ ಪ್ರಕ್ರಿಯೆ
ಮತಾಂತರ ಸ್ಥಳದ ಫೋಟೋ
TV9 Web
| Edited By: |

Updated on: Jul 11, 2021 | 5:36 PM

Share

ಇಸ್ಲಮಾಬಾದ್​: ಪಾಕಿಸ್ತಾನದ ಸಿಂಧ್ ಪ್ರಾಂತದ ಮಲ್ಟಿ ಎಂಬ ಪ್ರದೇಶದಲ್ಲಿ ಸುಮಾರು 60 ಮಂದಿ ಹಿಂದುಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿದೆ. ಅಲ್ಲಿನ ಮುನ್ಸಿಪಲ್​ ಅಧ್ಯಕ್ಷನ ಎದುರಿಗೇ ಈ ಮತಾಂತರ ನಡೆದಿದ್ದು, ಇವರ ಬಳಿ ಒತ್ತಾಯ ಪೂರ್ವಕವಾಗಿ ಇಸ್ಲಾಂನ ಪ್ರಮಾಣವಚನ ಓದಿಸಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಕೇವಲ 4.5 ಮಿಲಿಯನ್​​ಗಳಷ್ಟೇ ಅಂದರೆ ಪಾಕಿಸ್ತಾನದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.2ರಷ್ಟು ಮಾತ್ರ ಹಿಂದೂಗಳಿದ್ದಾರೆ. ಅದರಲ್ಲೂ ಈ ಸಿಂಧ್​ ಪ್ರಾಂತದಲ್ಲೇ ಹೆಚ್ಚು ಹಿಂದೂಗಳು ವಾಸಿಸುತ್ತಿದ್ದಾರೆ. ಇಲ್ಲಿನ ಪುರಸಭೆ ಅಧ್ಯಕ್ಷ ಅಬ್ದುಲ್​ ರವೂಫ್​ ನಿಜಾಮಾನಿಯೇ ಖುದ್ದಾಗಿ ನಿಂತು ಮತಾಂತರ ನಡೆಸುತ್ತಿರುವುದು ಗೊತ್ತಾಗಿದೆ. ಅವರು ತಮ್ಮ ಫೇಸ್​ಬುಕ್​​ನಲ್ಲಿ ಪೋಸ್ಟ್ ಹಾಕಿ, ಇವತ್ತು ನನ್ನ ನೇತೃತ್ವದಲ್ಲಿ 60 ಹಿಂದೂಗಳು ಮುಸ್ಲಿಂ ಧರ್ಮ ಸ್ವೀಕರಿಸಿದರು. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಹಾಗೇ, ಒಂದಷ್ಟು ಜನರನ್ನು ಕೂರಿಸಿಕೊಂಡು ಅವರಿಗೆ ಇಸ್ಲಾಂ ಬಗ್ಗೆ ಬೋಧಿಸುತ್ತಿರುವ ವಿಡಿಯೋ ಕೂಡ ಶೇರ್ ಮಾಡಿಕೊಂಡಿದ್ದಾರೆ.

ಪಾಕಿಸ್ತಾನದ ಸಿಂಧ್​​ನಿಂದ ಹೀಗೆ ಮತಾಂತರದ ಬಗ್ಗೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಮಾರ್ಚ್​ನಲ್ಲಿ 13 ವರ್ಷದ ಬಾಲಕಿ ಕವಿತಾ ಎಂಬುವಳನ್ನು ಅಪಹರಿಸಿ, ನಂತರ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿತ್ತು. ಆಕೆಯನ್ನು ಮಧ್ಯದಲ್ಲಿ ಕೂರಿಸಿ, ಹಲವು ಮುಸ್ಲಿಂ ಮುಖಂಡರು ಸೇರಿ ಮತಾಂತರ ಮಾಡಿದ ಪ್ರಕ್ರಿಯೆಯ ವಿಡಿಯೋ ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ: ‘ಇದರಲ್ಲಿ ಯಾರೇ ಇದ್ರೂ ಬಿಡಲ್ಲ‘; ವಂಚನೆ ಪ್ರಯತ್ನದ ಬಗ್ಗೆ ದರ್ಶನ್​ ಎಚ್ಚರಿಕೆ

60 Hindus forcibly converted to Islam in Sindh province of Pakistan

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ