AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 16, 2022 | 9:04 PM

Share

ಟೋಕಿಯೊ: ಉತ್ತರ ಜಪಾನ್‌ನ ಫುಕುಶಿಮಾ ( Fukushima) ಕರಾವಳಿಯಲ್ಲಿ ಬುಧವಾರ ಸಂಜೆ 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ(tsunami) ಎಚ್ಚರಿಕೆ ನೀಡಲಾಗಿದೆ. ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ. ಇದು  9.0 ತೀವ್ರತೆಯ ಭೂಕಂಪ ಮತ್ತು ಸುನಾಮಿಯಿಂದ ಧ್ವಂಸಗೊಂಡಿತ್ತು. ಅಂದಹಾಗೆ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಿಯಾಗಿ ಮತ್ತು ಫುಕುಶಿಮಾ ಪ್ರಾಂತ್ಯಗಳ ಭಾಗಗಳಲ್ಲಿ ಒಂದು ಮೀಟರ್ (3-ಅಡಿ) ವರೆಗೆ ಸಮುದ್ರ ಉಲ್ಬಣಗೊಂಡಿದ್ದು ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆ ನೀಡಿದೆ. ಎನ್ಎಚ್​​ಕೆ ರಾಷ್ಟ್ರೀಯ ದೂರದರ್ಶನವು ಸುನಾಮಿ ಈಗಾಗಲೇ ಕೆಲವು ಪ್ರದೇಶಗಳನ್ನು ತಲುಪಿರಬಹುದು ಎಂದು ಹೇಳಿದೆ. 2011 ರ ಭೂಕಂಪ ಮತ್ತು ಸುನಾಮಿಯ ನಂತರ ಅನೇಕ ಕರಗುವಿಕೆಗಳನ್ನು ಅನುಭವಿಸಿದ ಫುಕುಶಿಮಾ ಡೈಚಿ ಪರಮಾಣು ಸ್ಥಾವರವನ್ನು ನಿರ್ವಹಿಸುವ ಟೋಕಿಯೊ ಎಲೆಕ್ಟ್ರಿಕ್ ಪವರ್ ಕಂಪನಿ ಹೋಲ್ಡಿಂಗ್ಸ್(TEPCO) , ತಮ್ಮ ಕಾರ್ಮಿಕರು ಯಾವುದೇ ಸಂಭವನೀಯ ಹಾನಿಗಳ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದೆ.

ಟೋಕಿಯೊ ಸೇರಿದಂತೆ ಪೂರ್ವ ಜಪಾನ್‌ನ ದೊಡ್ಡ ಭಾಗಗಳಲ್ಲಿ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕಂಪನ ಅನುಭವಿಸಿವೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.

ಟೋಕಿಯೊದಲ್ಲಿ 700,000 ಸೇರಿದಂತೆ ಎರಡು ದಶಲಕ್ಷಕ್ಕೂ ಹೆಚ್ಚು ಮನೆಗಳು ವಿದ್ಯುತ್ ಇಲ್ಲದೆ ಉಳಿದಿವೆ ಎಂದು ವಿದ್ಯುತ್ ಪೂರೈಕೆದಾರ ಟೆಪ್ಕೊ  ಹೇಳಿದೆ.

ಜಪಾನ್ ಪೆಸಿಫಿಕ್ “ರಿಂಗ್ ಆಫ್ ಫೈರ್” ಮೇಲೆ ಕುಳಿತಿದೆ, ಇದು ಆಗ್ನೇಯ ಏಷ್ಯಾದ ಮೂಲಕ ಮತ್ತು ಪೆಸಿಫಿಕ್ ಜಲಾನಯನದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಪ್ರದೇಶವಾಗಿದೆ. ದೇಶವು ನಿಯಮಿತವಾಗಿ ಭೂಕಂಪಗಳಿಂದ ಹಾನಿಗೊಳಗಾಗುತ್ತದೆ ಮತ್ತು ಕಟ್ಟಡಗಳು ಬಲವಾದ ಕಂಪನಗಳನ್ನು ತಡೆದುಕೊಳ್ಳಬಲ್ಲವು ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ನಿರ್ಮಾಣ ನಿಯಮಗಳನ್ನು ಹೊಂದಿದೆ. ಆದರೆ ಈಶಾನ್ಯ ಜಪಾನ್‌ನಲ್ಲಿ 2011 ರಲ್ಲಿ ಸಮುದ್ರದೊಳಗಿನ ಭೂಕಂಪವು ಮಾರಣಾಂತಿಕ ಸುನಾಮಿಯನ್ನು ಪ್ರಚೋದಿಸಿತ್ತು. ಈ ಸುನಾಮಿಯಲ್ಲಿ ಸುಮಾರು 18,500 ಮಂದಿ ಸಾವಿಗೀಡಾಗಿದ್ದರು.

ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಸಂದೇಶ

Published On - 8:44 pm, Wed, 16 March 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ