AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 16, 2022 | 9:04 PM

Share

ಟೋಕಿಯೊ: ಉತ್ತರ ಜಪಾನ್‌ನ ಫುಕುಶಿಮಾ ( Fukushima) ಕರಾವಳಿಯಲ್ಲಿ ಬುಧವಾರ ಸಂಜೆ 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ(tsunami) ಎಚ್ಚರಿಕೆ ನೀಡಲಾಗಿದೆ. ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ. ಇದು  9.0 ತೀವ್ರತೆಯ ಭೂಕಂಪ ಮತ್ತು ಸುನಾಮಿಯಿಂದ ಧ್ವಂಸಗೊಂಡಿತ್ತು. ಅಂದಹಾಗೆ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಿಯಾಗಿ ಮತ್ತು ಫುಕುಶಿಮಾ ಪ್ರಾಂತ್ಯಗಳ ಭಾಗಗಳಲ್ಲಿ ಒಂದು ಮೀಟರ್ (3-ಅಡಿ) ವರೆಗೆ ಸಮುದ್ರ ಉಲ್ಬಣಗೊಂಡಿದ್ದು ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆ ನೀಡಿದೆ. ಎನ್ಎಚ್​​ಕೆ ರಾಷ್ಟ್ರೀಯ ದೂರದರ್ಶನವು ಸುನಾಮಿ ಈಗಾಗಲೇ ಕೆಲವು ಪ್ರದೇಶಗಳನ್ನು ತಲುಪಿರಬಹುದು ಎಂದು ಹೇಳಿದೆ. 2011 ರ ಭೂಕಂಪ ಮತ್ತು ಸುನಾಮಿಯ ನಂತರ ಅನೇಕ ಕರಗುವಿಕೆಗಳನ್ನು ಅನುಭವಿಸಿದ ಫುಕುಶಿಮಾ ಡೈಚಿ ಪರಮಾಣು ಸ್ಥಾವರವನ್ನು ನಿರ್ವಹಿಸುವ ಟೋಕಿಯೊ ಎಲೆಕ್ಟ್ರಿಕ್ ಪವರ್ ಕಂಪನಿ ಹೋಲ್ಡಿಂಗ್ಸ್(TEPCO) , ತಮ್ಮ ಕಾರ್ಮಿಕರು ಯಾವುದೇ ಸಂಭವನೀಯ ಹಾನಿಗಳ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದೆ.

ಟೋಕಿಯೊ ಸೇರಿದಂತೆ ಪೂರ್ವ ಜಪಾನ್‌ನ ದೊಡ್ಡ ಭಾಗಗಳಲ್ಲಿ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕಂಪನ ಅನುಭವಿಸಿವೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.

ಟೋಕಿಯೊದಲ್ಲಿ 700,000 ಸೇರಿದಂತೆ ಎರಡು ದಶಲಕ್ಷಕ್ಕೂ ಹೆಚ್ಚು ಮನೆಗಳು ವಿದ್ಯುತ್ ಇಲ್ಲದೆ ಉಳಿದಿವೆ ಎಂದು ವಿದ್ಯುತ್ ಪೂರೈಕೆದಾರ ಟೆಪ್ಕೊ  ಹೇಳಿದೆ.

ಜಪಾನ್ ಪೆಸಿಫಿಕ್ “ರಿಂಗ್ ಆಫ್ ಫೈರ್” ಮೇಲೆ ಕುಳಿತಿದೆ, ಇದು ಆಗ್ನೇಯ ಏಷ್ಯಾದ ಮೂಲಕ ಮತ್ತು ಪೆಸಿಫಿಕ್ ಜಲಾನಯನದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಪ್ರದೇಶವಾಗಿದೆ. ದೇಶವು ನಿಯಮಿತವಾಗಿ ಭೂಕಂಪಗಳಿಂದ ಹಾನಿಗೊಳಗಾಗುತ್ತದೆ ಮತ್ತು ಕಟ್ಟಡಗಳು ಬಲವಾದ ಕಂಪನಗಳನ್ನು ತಡೆದುಕೊಳ್ಳಬಲ್ಲವು ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ನಿರ್ಮಾಣ ನಿಯಮಗಳನ್ನು ಹೊಂದಿದೆ. ಆದರೆ ಈಶಾನ್ಯ ಜಪಾನ್‌ನಲ್ಲಿ 2011 ರಲ್ಲಿ ಸಮುದ್ರದೊಳಗಿನ ಭೂಕಂಪವು ಮಾರಣಾಂತಿಕ ಸುನಾಮಿಯನ್ನು ಪ್ರಚೋದಿಸಿತ್ತು. ಈ ಸುನಾಮಿಯಲ್ಲಿ ಸುಮಾರು 18,500 ಮಂದಿ ಸಾವಿಗೀಡಾಗಿದ್ದರು.

ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಸಂದೇಶ

Published On - 8:44 pm, Wed, 16 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ