AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ.

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 16, 2022 | 9:04 PM

Share

ಟೋಕಿಯೊ: ಉತ್ತರ ಜಪಾನ್‌ನ ಫುಕುಶಿಮಾ ( Fukushima) ಕರಾವಳಿಯಲ್ಲಿ ಬುಧವಾರ ಸಂಜೆ 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ(tsunami) ಎಚ್ಚರಿಕೆ ನೀಡಲಾಗಿದೆ. ಭೂಕಂಪವು ಸಮುದ್ರದಿಂದ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಈ ಪ್ರದೇಶವು ಉತ್ತರ ಜಪಾನ್‌ನ ಭಾಗವಾಗಿದೆ. ಇದು  9.0 ತೀವ್ರತೆಯ ಭೂಕಂಪ ಮತ್ತು ಸುನಾಮಿಯಿಂದ ಧ್ವಂಸಗೊಂಡಿತ್ತು. ಅಂದಹಾಗೆ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಿಯಾಗಿ ಮತ್ತು ಫುಕುಶಿಮಾ ಪ್ರಾಂತ್ಯಗಳ ಭಾಗಗಳಲ್ಲಿ ಒಂದು ಮೀಟರ್ (3-ಅಡಿ) ವರೆಗೆ ಸಮುದ್ರ ಉಲ್ಬಣಗೊಂಡಿದ್ದು ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆ ನೀಡಿದೆ. ಎನ್ಎಚ್​​ಕೆ ರಾಷ್ಟ್ರೀಯ ದೂರದರ್ಶನವು ಸುನಾಮಿ ಈಗಾಗಲೇ ಕೆಲವು ಪ್ರದೇಶಗಳನ್ನು ತಲುಪಿರಬಹುದು ಎಂದು ಹೇಳಿದೆ. 2011 ರ ಭೂಕಂಪ ಮತ್ತು ಸುನಾಮಿಯ ನಂತರ ಅನೇಕ ಕರಗುವಿಕೆಗಳನ್ನು ಅನುಭವಿಸಿದ ಫುಕುಶಿಮಾ ಡೈಚಿ ಪರಮಾಣು ಸ್ಥಾವರವನ್ನು ನಿರ್ವಹಿಸುವ ಟೋಕಿಯೊ ಎಲೆಕ್ಟ್ರಿಕ್ ಪವರ್ ಕಂಪನಿ ಹೋಲ್ಡಿಂಗ್ಸ್(TEPCO) , ತಮ್ಮ ಕಾರ್ಮಿಕರು ಯಾವುದೇ ಸಂಭವನೀಯ ಹಾನಿಗಳ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದೆ.

ಟೋಕಿಯೊ ಸೇರಿದಂತೆ ಪೂರ್ವ ಜಪಾನ್‌ನ ದೊಡ್ಡ ಭಾಗಗಳಲ್ಲಿ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕಂಪನ ಅನುಭವಿಸಿವೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.

ಟೋಕಿಯೊದಲ್ಲಿ 700,000 ಸೇರಿದಂತೆ ಎರಡು ದಶಲಕ್ಷಕ್ಕೂ ಹೆಚ್ಚು ಮನೆಗಳು ವಿದ್ಯುತ್ ಇಲ್ಲದೆ ಉಳಿದಿವೆ ಎಂದು ವಿದ್ಯುತ್ ಪೂರೈಕೆದಾರ ಟೆಪ್ಕೊ  ಹೇಳಿದೆ.

ಜಪಾನ್ ಪೆಸಿಫಿಕ್ “ರಿಂಗ್ ಆಫ್ ಫೈರ್” ಮೇಲೆ ಕುಳಿತಿದೆ, ಇದು ಆಗ್ನೇಯ ಏಷ್ಯಾದ ಮೂಲಕ ಮತ್ತು ಪೆಸಿಫಿಕ್ ಜಲಾನಯನದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಪ್ರದೇಶವಾಗಿದೆ. ದೇಶವು ನಿಯಮಿತವಾಗಿ ಭೂಕಂಪಗಳಿಂದ ಹಾನಿಗೊಳಗಾಗುತ್ತದೆ ಮತ್ತು ಕಟ್ಟಡಗಳು ಬಲವಾದ ಕಂಪನಗಳನ್ನು ತಡೆದುಕೊಳ್ಳಬಲ್ಲವು ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ನಿರ್ಮಾಣ ನಿಯಮಗಳನ್ನು ಹೊಂದಿದೆ. ಆದರೆ ಈಶಾನ್ಯ ಜಪಾನ್‌ನಲ್ಲಿ 2011 ರಲ್ಲಿ ಸಮುದ್ರದೊಳಗಿನ ಭೂಕಂಪವು ಮಾರಣಾಂತಿಕ ಸುನಾಮಿಯನ್ನು ಪ್ರಚೋದಿಸಿತ್ತು. ಈ ಸುನಾಮಿಯಲ್ಲಿ ಸುಮಾರು 18,500 ಮಂದಿ ಸಾವಿಗೀಡಾಗಿದ್ದರು.

ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಸಂದೇಶ

Published On - 8:44 pm, Wed, 16 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?