AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ.

Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on:Apr 03, 2024 | 8:01 AM

Share

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ. ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ,  ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಚಿತ್ರಗಳನ್ನು ತೋರಿಸಿವೆ. ಶಾಂಘೈ ವರೆಗೂ ಭೂಕಂಪನದ ಅನುಭವವಾಗಿದೆ.

ಚೀನಾದ ಫುಜಿಯಾನ್ ಪ್ರಾಂತ್ಯದ ಫುಝೌ, ಕ್ಸಿಯಾಮೆನ್, ಕ್ವಾನ್‌ಝೌ ಮತ್ತು ನಿಂಗ್ಡೆಯಲ್ಲೂ ಭೂಕಂಪದ ಅನುಭವವಾಗಿದೆ. ತೈವಾನ್‌ನ ಅಧಿಕೃತ ಸೆಂಟ್ರಲ್ ನ್ಯೂಸ್ ಏಜೆನ್ಸಿ ಈ ಭೂಕಂಪವು 1999 ರ ನಂತರ ದ್ವೀಪವನ್ನು ಅಪ್ಪಳಿಸಿದ ಅತಿದೊಡ್ಡ ಭೂಕಂಪವಾಗಿದೆ. 7.6 ತೀವ್ರತೆಯ ಭೂಕಂಪವು ಸುಮಾರು 2,400 ಜನರ ಸಾವಿಗೆ ಕಾರಣವಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:31 am, Wed, 3 April 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ