ಫಿಲಿಪೈನ್ಸ್‌ನಲ್ಲಿ 7.5 ತೀವ್ರತೆಯ ಭೂಕಂಪನ, ಸುನಾಮಿ ಎಚ್ಚರಿಕೆ ನೀಡಿದ ಯುಎಸ್ ಏಜೆನ್ಸಿ

Philippines earthquake: ಫಿಲಿಪೈನ್ಸ್‌ನಲ್ಲಿ 7.5 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಭೂಕಂಪದ ಬೆನ್ನಲ್ಲೇ ಅಮೆರಿಕದ ಏಜೆನ್ಸಿ ಸುನಾಮಿ ಎಚ್ಚರಿಕೆ ನೀಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫಿಲಿಪೈನ್ಸ್‌ನಲ್ಲಿ 7.5 ತೀವ್ರತೆಯ ಭೂಕಂಪನ, ಸುನಾಮಿ ಎಚ್ಚರಿಕೆ ನೀಡಿದ ಯುಎಸ್ ಏಜೆನ್ಸಿ
ಪ್ರಾತಿನಿಧಿಕ ಚಿತ್ರ
Follow us
|

Updated on:Dec 02, 2023 | 9:07 PM

ಮಿಂಡಾನಾವೊ ಡಿಸೆಂಬರ್ 02: ಶನಿವಾರ ಫಿಲಿಪೈನ್ಸ್‌ನ(Philippines )ಮಿಂಡಾನಾವೊದಲ್ಲಿ 7.5 ತೀವ್ರತೆಯ ಭೂಕಂಪ (earthquake) ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ. ಭೂಕಂಪವು 63 ಕಿಮೀ (39 ಮೈಲುಗಳು) ಆಳದಲ್ಲಿದೆ ಎಂದು ಇಎಂಎಸ್​​ಸಿ ತಿಳಿಸಿದೆ.ಭೂಕಂಪದ ನಂತರ ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆಯು ಸುನಾಮಿ ಎಚ್ಚರಿಕೆಯನ್ನು ನೀಡಿದೆ.

ಸುನಾಮಿ ಶೀಘ್ರದಲ್ಲೇ ಫಿಲಿಪೈನ್ಸ್ ಮತ್ತು ಜಪಾನ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ  ಎಂದು ರಾಯಿಟರ್ಸ್ ವರದಿ ಮಾಡಿದೆ

ಫಿಲಿಪೈನ್ ಭೂಕಂಪಶಾಸ್ತ್ರ ಏಜೆನ್ಸಿ PHIVOLCS ಪ್ರಕಾರ ಸುನಾಮಿ ಅಲೆಗಳು ಫಿಲಿಪೈನ್ಸ್ ಅನ್ನು ಮಧ್ಯರಾತ್ರಿಯ ವೇಳೆಗೆ ಅಪ್ಪಳಿಸಬಹುದು (1600 GMT) ಮತ್ತು ಗಂಟೆಗಳವರೆಗೆ ಮುಂದುವರಿಯಬಹುದು. ಜಪಾನಿನ ಬ್ರಾಡ್‌ಕಾಸ್ಟರ್ NHK, ಒಂದು ಮೀಟರ್ (3 ಅಡಿ) ಎತ್ತರದ ಸುನಾಮಿ ಅಲೆಗಳು ಸ್ವಲ್ಪ ಸಮಯದ ನಂತರ ಅಂದರೆ ಭಾನುವಾರದಂದು (ಶನಿವಾರ 1630 GMT) 1:30 ಕ್ಕೆ ಜಪಾನ್‌ನ ಪಶ್ಚಿಮ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ

ಕಳೆದ ತಿಂಗಳ ಆರಂಭದಲ್ಲಿ ದಕ್ಷಿಣ ಫಿಲಿಪೈನ್ಸ್‌ನಲ್ಲಿ 6.7 ತೀವ್ರತೆಯ ಕಡಲಾಚೆಯ ಭೂಕಂಪದಲ್ಲಿ ಎಂಟು ಜನರು ಸಾವಿಗೀಡಾಗಿದ್ದರು

ನವೆಂಬರ್ 17 ರ ಭೂಕಂಪದಲ್ಲಿ ಸಾವುಗಳು ಸಾರಂಗನಿ, ದಕ್ಷಿಣ ಕೊಟಾಬಾಟೊ ಮತ್ತು ದಾವೊ ಆಕ್ಸಿಡೆಂಟಲ್ ಪ್ರಾಂತ್ಯಗಳಿಂದ ವರದಿಯಾಗಿದೆ. ಆದರೆ ಕಂಪನದಿಂದ 13 ಜನರು ಗಾಯಗೊಂಡಿದ್ದಾರೆ, ಇದು ಹಲವಾರು ಜನರನ್ನು ಭಯಭೀತರನ್ನಾಗಿ ಮಾಡಿತು. ಇದು  50 ಕ್ಕೂ ಹೆಚ್ಚು ಮನೆಗಳು ಮತ್ತು ಇತರ ಕಟ್ಟಡಗಳನ್ನು ಹಾನಿಗೊಳಿಸಿತು.

ಇದನ್ನೂ ಓದಿTim Southee: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟಿಮ್ ಸೌಥಿ

ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ನೆಲೆಗೊಂಡಿರುವ ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತವೆ, ಇದನ್ನು U.S. ಭೂವೈಜ್ಞಾನಿಕ ಸಮೀಕ್ಷೆಯು “ವಿಶ್ವದ ಅತ್ಯಂತ ಭೂಕಂಪನ ಮತ್ತು ಜ್ವಾಲಾಮುಖಿ ಸಕ್ರಿಯ ವಲಯ” ಎಂದು ವಿವರಿಸುತ್ತದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 2 December 23

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?