AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಯುಎಸ್​ ಸೇನೆ ಎಚ್ಚರಿಕೆ ನೀಡಿದೆ.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ
ಕಾಬೂಲ್​ ಏರ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)​
TV9 Web
| Edited By: |

Updated on: Aug 22, 2021 | 2:52 PM

Share

ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಜನಸಂದಣಿ, ನೂಕಾಟಗಳು ಮುಂದುವರಿದಿದ್ದು ಮತ್ತೆ 7 ಮಂದಿ ಮೃತಪಟ್ಟಿದ್ದಾಗಿ ಇಂದು ಬ್ರಿಟಿಷ್​ ಸೇನೆ ತಿಳಿಸಿದೆ. ತಾಲಿಬಾನ್​​ ಆಡಳಿತಕ್ಕೆ ಒಳಪಟ್ಟ ಅಫ್ಘಾನಿಸ್ತಾನದಿಂದ ಪಾರಾಗುವವರು ಇನ್ನೂ ಅಪಾಯದಲ್ಲೇ ಇದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಎಂದೂ ಹೇಳಿದೆ. ಅಫ್ಘಾನಿಸ್ತಾನದಿಂದ ಜನರನ್ನು ರಕ್ಷಿಸುವ ಕೆಲಸ ತುಂಬ ಸವಾಲಾಗಿ ಪರಿಣಮಿಸಿದೆ. ಈ ಮಧ್ಯೆಯೂ ನಾವು ಸುರಕ್ಷಿತವಾಗಿ ಜನರನ್ನು ಅಲ್ಲಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದೇವೆ ಎಂದು ಯುಕೆ ಸೈನ್ಯ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಅಫ್ಘಾನಿಸ್ತಾನದಲ್ಲಿರುವ ಯುಎಸ್​ ರಾಯಭಾರಿ ಕಚೇರಿ, ಅಲ್ಲಿರುವ ಅಮೆರಿಕನ್ನರಿಗೆ ಎಚ್ಚರಿಕೆ ನೀಡಿದ ಒಂದು ದಿನದಲ್ಲೇ ಹೀಗೊಂದು ಬೆಳವಣಿಗೆ ನಡೆದಿದೆ. ಕಾಬೂಲ್​ ಏರ್​ಪೋರ್ಟ್ ಸುತ್ತಲೂ ತಾಲಿಬಾನಿಗಳು ಇದ್ದಾರೆ. ಕೆಲವರನ್ನು ಬೆದರಿಸಿ ಕಳಿಸುತ್ತಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ, ಕಾಬೂಲ್​ ಏರ್​ಪೋರ್ಟ್​ನಲ್ಲಿ ಸಿಕ್ಕಾಪಟೆ ನೂಕುನುಗ್ಗಲು ಆಗುತ್ತಿರುವುದರಿಂದಲೂ ಜೀವ ಹಾನಿಯಾಗುತ್ತಿದೆ.  ಈ ಮಧ್ಯೆ ಕಾಬೂಲ್​ ಏರ್​ಪೋರ್ಟ್​ ಮೇಲೆ ಅಫ್ಘಾನಿಸ್ತಾನದಲ್ಲಿರುವ ಇಸ್ಲಾಮಿಕ್​ ಸ್ಟೇಟ್​​ನ ಶಾಖೆಯಿಂದ ದಾಳಿಯಾಗಬಹುದು ಎಂಬ ಆತಂಕ ಯುಎಸ್​ಗೆ ಶುರುವಾಗಿದೆ. ಹಾಗಾಗಿಯೇ ಅಲ್ಲಿರುವ ತಮ್ಮ ದೇಶದ ನಾಗರಿಕರಿಗೆ ಕಾಬೂಲ್​ ಏರ್​ಪೋರ್ಟ್​ಗೆ ಬರಬೇಡಿ ಎನ್ನುತ್ತಿದೆ.

ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಮುಂದೆ ಮೈಮರೆತು ಬಳುಕಿದ ನೀರೆಯರು: ಇದು ಅಗೌರವ ಎಂದ ನೆಟ್ಟಿಗರು

ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ