AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಯುಎಸ್​ ಸೇನೆ ಎಚ್ಚರಿಕೆ ನೀಡಿದೆ.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ
ಕಾಬೂಲ್​ ಏರ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)​
TV9 Web
| Edited By: |

Updated on: Aug 22, 2021 | 2:52 PM

Share

ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಜನಸಂದಣಿ, ನೂಕಾಟಗಳು ಮುಂದುವರಿದಿದ್ದು ಮತ್ತೆ 7 ಮಂದಿ ಮೃತಪಟ್ಟಿದ್ದಾಗಿ ಇಂದು ಬ್ರಿಟಿಷ್​ ಸೇನೆ ತಿಳಿಸಿದೆ. ತಾಲಿಬಾನ್​​ ಆಡಳಿತಕ್ಕೆ ಒಳಪಟ್ಟ ಅಫ್ಘಾನಿಸ್ತಾನದಿಂದ ಪಾರಾಗುವವರು ಇನ್ನೂ ಅಪಾಯದಲ್ಲೇ ಇದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಎಂದೂ ಹೇಳಿದೆ. ಅಫ್ಘಾನಿಸ್ತಾನದಿಂದ ಜನರನ್ನು ರಕ್ಷಿಸುವ ಕೆಲಸ ತುಂಬ ಸವಾಲಾಗಿ ಪರಿಣಮಿಸಿದೆ. ಈ ಮಧ್ಯೆಯೂ ನಾವು ಸುರಕ್ಷಿತವಾಗಿ ಜನರನ್ನು ಅಲ್ಲಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದೇವೆ ಎಂದು ಯುಕೆ ಸೈನ್ಯ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಅಫ್ಘಾನಿಸ್ತಾನದಲ್ಲಿರುವ ಯುಎಸ್​ ರಾಯಭಾರಿ ಕಚೇರಿ, ಅಲ್ಲಿರುವ ಅಮೆರಿಕನ್ನರಿಗೆ ಎಚ್ಚರಿಕೆ ನೀಡಿದ ಒಂದು ದಿನದಲ್ಲೇ ಹೀಗೊಂದು ಬೆಳವಣಿಗೆ ನಡೆದಿದೆ. ಕಾಬೂಲ್​ ಏರ್​ಪೋರ್ಟ್ ಸುತ್ತಲೂ ತಾಲಿಬಾನಿಗಳು ಇದ್ದಾರೆ. ಕೆಲವರನ್ನು ಬೆದರಿಸಿ ಕಳಿಸುತ್ತಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ, ಕಾಬೂಲ್​ ಏರ್​ಪೋರ್ಟ್​ನಲ್ಲಿ ಸಿಕ್ಕಾಪಟೆ ನೂಕುನುಗ್ಗಲು ಆಗುತ್ತಿರುವುದರಿಂದಲೂ ಜೀವ ಹಾನಿಯಾಗುತ್ತಿದೆ.  ಈ ಮಧ್ಯೆ ಕಾಬೂಲ್​ ಏರ್​ಪೋರ್ಟ್​ ಮೇಲೆ ಅಫ್ಘಾನಿಸ್ತಾನದಲ್ಲಿರುವ ಇಸ್ಲಾಮಿಕ್​ ಸ್ಟೇಟ್​​ನ ಶಾಖೆಯಿಂದ ದಾಳಿಯಾಗಬಹುದು ಎಂಬ ಆತಂಕ ಯುಎಸ್​ಗೆ ಶುರುವಾಗಿದೆ. ಹಾಗಾಗಿಯೇ ಅಲ್ಲಿರುವ ತಮ್ಮ ದೇಶದ ನಾಗರಿಕರಿಗೆ ಕಾಬೂಲ್​ ಏರ್​ಪೋರ್ಟ್​ಗೆ ಬರಬೇಡಿ ಎನ್ನುತ್ತಿದೆ.

ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಮುಂದೆ ಮೈಮರೆತು ಬಳುಕಿದ ನೀರೆಯರು: ಇದು ಅಗೌರವ ಎಂದ ನೆಟ್ಟಿಗರು

ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು