AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಯುದ್ಧದ ನಡುವೆ 7 ಮಂದಿಗೆ ಗಾಯ, 17 ಮಂದಿ ಹಮಾಸ್ ವಶದಲ್ಲಿದ್ದಾರೆ: ನೇಪಾಳ

ಇಸ್ರೇಲ್‌ನ ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ತಂಡಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿಸಲಾಗಿದೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸಲಾಗಿದೆ. "ಅವರು (ನೇಪಾಳಿಗಳು) ಹಾಸ್ಟೆಲ್‌ನಲ್ಲಿದ್ದಾರೆ ಮತ್ತು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ತೀವ್ರ ಹೋರಾಟದ ಕಾರಣ ಈ ಪ್ರದೇಶವನ್ನು ಪ್ರವೇಶಿಸಲಾಗುವುದಿಲ್ಲ" ಎಂದು ಅವರು ಹೇಳಿದರು.

ಇಸ್ರೇಲ್ ಯುದ್ಧದ ನಡುವೆ 7 ಮಂದಿಗೆ ಗಾಯ, 17 ಮಂದಿ ಹಮಾಸ್ ವಶದಲ್ಲಿದ್ದಾರೆ: ನೇಪಾಳ
ಇಸ್ರೇಲ್ ಯುದ್ಧ
Follow us
ರಶ್ಮಿ ಕಲ್ಲಕಟ್ಟ
|

Updated on: Oct 07, 2023 | 7:54 PM

ಜೆರುಸಲೇಮ್ ಅಕ್ಟೋಬರ್ 07: ಇಸ್ರೇಲ್ ವಿಶ್ವವಿದ್ಯಾನಿಲಯದಲ್ಲಿ ( Israel University) ಓದುತ್ತಿರುವ ಕನಿಷ್ಠ ಏಳು ನೇಪಾಳಿ (Nepal) ವಿದ್ಯಾರ್ಥಿಗಳು ಗಾಯಗೊಂಡಿದ್ದು ಮತ್ತು ಹಮಾಸ್ (Hamas) ಪಡೆಗಳ ವಶದಲ್ಲಿದ್ದಾರೆ ಎಂದು ಇಸ್ರೇಲ್‌ಗೆ ನೇಪಾಳದ ರಾಯಭಾರಿ ಖಚಿತಪಡಿಸಿದ್ದಾರೆ. ಇಸ್ರೇಲಿ ಸರ್ಕಾರದ “ಲರ್ನ್ ಆಂಡ್ ಅರ್ನ್” ಕಾರ್ಯಕ್ರಮದ ಅಡಿಯಲ್ಲಿ ಹರ್ಜ್ಲಿಯಾದಲ್ಲಿ ಏಳು ನೇಪಾಳಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ನೇಪಾಳದ ರಾಯಭಾರಿ ಕಾಂತಾ ರಿಜಾಲ್ ಹೇಳಿದರು.

ದಕ್ಷಿಣ ಇಸ್ರೇಲ್‌ನ ಅಲ್ಯುಮಿಮ್‌ನಲ್ಲಿರುವ ಕೃಷಿ ಫಾರ್ಮ್‌ನಲ್ಲಿ ಹೆಚ್ಚುವರಿ 10 ನೇಪಾಳಿ ವಿದ್ಯಾರ್ಥಿಗಳ ಜೊತೆಗೆ ಅವರನ್ನು ಹಮಾಸ್ ಪಡೆಗಳು ಸೆರೆಯಲ್ಲಿ ಇರಿಸಲಾಗಿದೆ ಎಂದು ಕಾಂತಾ ರಿಜಾಲ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ತಂಡಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿಸಲಾಗಿದೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸಲಾಗಿದೆ. “ಅವರು (ನೇಪಾಳಿಗಳು) ಹಾಸ್ಟೆಲ್‌ನಲ್ಲಿದ್ದಾರೆ ಮತ್ತು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ತೀವ್ರ ಹೋರಾಟದ ಕಾರಣ ಈ ಪ್ರದೇಶವನ್ನು ಪ್ರವೇಶಿಸಲಾಗುವುದಿಲ್ಲ” ಎಂದು ಅವರು ಹೇಳಿದರು.

ಇಸ್ರೇಲ್‌ನ ತುರ್ತು ಸೇವೆಯ ಪ್ರಕಾರ ಹಮಾಸ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ಕನಿಷ್ಠ 40 ಜನರು ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಹಮಾಸ್ ತನ್ನ ಸದಸ್ಯರು ಮಿಲಿಟರಿ ನೆಲೆಯ ಮೇಲಿನ ದಾಳಿಯ ಸಮಯದಲ್ಲಿ ಹಲವಾರು ಇಸ್ರೇಲಿ ಸೈನಿಕರನ್ನು ಸೆರೆಹಿಡಿಯುತ್ತಿರುವ ವಿಡಿಯೊವನ್ನು ಬಿಡುಗಡೆ ಮಾಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ತಮ್ಮ ದೇಶವು ಯುದ್ಧದಲ್ಲಿದೆ. ನಾವು ಗೆಲ್ಲುತ್ತೇವೆ ಎಂದು ಹೇಳಿದ್ದೇವೆ.

“ನಾವು ಯುದ್ಧದಲ್ಲಿದ್ದೇವೆ ಇಂದು ಬೆಳಿಗ್ಗೆ, ಹಮಾಸ್ ಇಸ್ರೇಲ್ ರಾಜ್ಯ ಮತ್ತು ಅದರ ನಾಗರಿಕರ ವಿರುದ್ಧ ಮಾರಣಾಂತಿಕ ಹಠಾತ್ ದಾಳಿಯನ್ನು ಪ್ರಾರಂಭಿಸಿತು. ಮುಂಜಾನೆಯಿಂದಲೂ ನಾವು ಇದರಲ್ಲೇ ಇದ್ದೇವೆ. ನಾನು ಭದ್ರತಾ ಸಂಸ್ಥೆಯ ಮುಖ್ಯಸ್ಥರನ್ನು ಕರೆದಿದ್ದೇನೆ. ಭಯೋತ್ಪಾದಕರು ಒಳನುಸುಳಿರುವ ಸಮುದಾಯಗಳನ್ನು ತೆರವುಗೊಳಿಸಲು ಮೊದಲನೆಯದಾಗಿ ಆದೇಶಿಸಿದೆ. ಇದನ್ನು ಪ್ರಸ್ತುತ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧದಲ್ಲಿ 40 ಜನ ಸಾವು; ಈ ಬಿಕ್ಕಟ್ಟು ಶುರುವಾಗಿದ್ದು ಹೇಗೆ?

ಅದೇ ಸಮಯದಲ್ಲಿ, ಮೀಸಲು ಪಡೆಗಳ  ವ್ಯಾಪಕ ಸಜ್ಜುಗೊಳಿಸುವಿಕೆಗೆ ನಾನು ಆದೇಶಿಸಿದ್ದೇನೆ. ಶತ್ರುಗಳ ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ನಾವು ಹೋರಾಡುತ್ತೇವೆ. ಅವರು ಇದಕ್ಕೆ ಹೆಚ್ಚಿನ ಬೆಲೆ ತೆರಬೇಕಾಗುತ್ತದೆ. ಈ ಮಧ್ಯೆ, ನಾನು ಇಸ್ರೇಲ್ ನಾಗರಿಕರಲ್ಲಿ ಹೇಳುವುದೇನೆಂದರೆ IDF ಮತ್ತು ಹೋಮ್ ಫ್ರಂಟ್ ಕಮಾಂಡ್‌ನ ನಿರ್ದೇಶನಗಳಿಗೆ ಬದ್ಧರಾಗಿರಿ. ನಾವು ಯುದ್ಧದಲ್ಲಿದ್ದೇವೆ ಮತ್ತು ನಾವು ಅದನ್ನು ಗೆಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ