AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಬಿರುಗಾಳಿಯಿಂದ ಅಲ್ಲೋಲಕಲ್ಲೋಲ; 20 ವಾಹನಗಳ ನಡುವೆ ಅಪಘಾತ, 7 ಮಂದಿ ಸಾವು

ರಸ್ತೆಯಲ್ಲಿ ಒಂದರ ಹಿಂದೆ ಒಂದರಂತೆ ಅನೇಕ ವಾಹನಗಳು ಹೋಗುತ್ತಿದ್ದಾಗ..ಏಕಾಏಕಿ ಬೀಸಿದ ಮರಳು ಸಹಿತ ಬಿರುಗಾಳಿಯಿಂದ ಕಣ್ಣೆಲ್ಲ ಮಂಜಾಯಿತು. ಹೀಗಾಗಿ ಚಾಲಕರ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದಿದೆ.

ಮರಳು ಬಿರುಗಾಳಿಯಿಂದ ಅಲ್ಲೋಲಕಲ್ಲೋಲ; 20 ವಾಹನಗಳ ನಡುವೆ ಅಪಘಾತ, 7 ಮಂದಿ ಸಾವು
ಯೂಟಾ ಹೆದ್ದಾರಿಯಲ್ಲಿ ವಾಹನಗಳ ಅಪಘಾತ
TV9 Web
| Edited By: |

Updated on:Jul 26, 2021 | 4:08 PM

Share

20 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡು ಏಳು ಮಂದಿ ಮೃತಪಟ್ಟ ಘಟನೆ ಯುಎಸ್​ನ ಯೂಟಾ(Utah) ರಾಜ್ಯದಲ್ಲಿ ಭಾನುವಾರ ಸಂಜೆ ನಡೆದಿದೆ. ಇದಕ್ಕೆ ಕಾರಣ ಮರಳು, ಧೂಳು (Sandstorm) ಸಹಿತ ಬಿರುಗಾಳಿ. ಈ ಮರಳು ಬಿರುಗಾಳಿಯಿಂದಾಗಿ ವಾಹನ ಚಾಲಕರಿಗೆ ಕಣ್ಣು ಬಿಡದಂತಾಗಿದೆ. ಹೀಗಾಗಿ ವಾಹನಗಳು ಒಂದಕ್ಕೊಂದು ಗುದ್ದಿಕೊಂಡಿದ್ದು, ಏಳು ಮಂದಿಯ ಜೀವ ಹೋಗಿದೆ. ಅನೇಕರು ಗಂಭೀರವಾಗಿ ಗಾಯಗೊಂಡಿದೆ ಎಂದು ಯೂಟಾದ ಸಾರ್ವಜನಿಕ ಸೇವಾ ವಿಭಾಗ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಯೂಟಾದ ಕಾನೋಶ್​ ಬಳಿ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ನಿಖರವಾಗಿ ಎಷ್ಟು ಜನರು ಗಾಯಗೊಂಡಿದ್ದಾರೆಂದು ಸಾರ್ವಜನಿಕ ಸೇವಾ ವಿಭಾಗ ತಿಳಿಸಿಲ್ಲ. ಆದರೆ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ರಸ್ತೆಯಲ್ಲಿ ಒಂದರ ಹಿಂದೆ ಒಂದರಂತೆ ಅನೇಕ ವಾಹನಗಳು ಹೋಗುತ್ತಿದ್ದಾಗ..ಏಕಾಏಕಿ ಬೀಸಿದ ಮರಳು ಸಹಿತ ಬಿರುಗಾಳಿಯಿಂದ ಕಣ್ಣೆಲ್ಲ ಮಂಜಾಯಿತು. ಹೀಗಾಗಿ ಚಾಲಕರ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದಿದೆ. ಗಾಯಗೊಂಡವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ ಯೂಟಾ ಹೆದ್ದಾರಿ ಗಸ್ತು ಅಧಿಕಾರಿಗಳು ರಿಚ್​ಫೀಲ್ಡ್​ ಮತ್ತು ಬೀವರ್​​ನಲ್ಲಿರುವ ಯೋಧರನ್ನು ಸಹಾಯಕ್ಕಾಗಿ ಕರೆಸಿದರು. ನೆಲ ಆಂಬುಲೆನ್ಸ್​ ಮತ್ತು ಏರ್​ ಅಂಬುಲೆನ್ಸ್​ಗಳೂ ಸ್ಥಳಕ್ಕೆ ಧಾವಿಸಿದವು ಎಂದು ಯೂಟಾ ಸಾರ್ವಜನಿಕ ಸೇವಾ ವಿಭಾಗ ಹೇಳಿಕೆಯಲ್ಲಿ ಮಾಹಿತಿ ನೀಡಿದೆ. ಟ್ರ್ಯಾಕ್ಟರ್​, ಕಾರುಗಳೆಲ್ಲ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಫೋಟೋಗಳು ಕೂಡ ವೈರಲ್​ ಆಗಿವೆ.

ಭಾನುವಾರ ಸಂಜೆ 4.30ರ ಹೊತ್ತಿಗೆ ಆಗ್ನೇಯ ಕನೋಶ್​​ನಲ್ಲಿ ಪ್ರಬಲವಾದ ಗುಡುಗು ಉಂಟಾಯಿತು. ಹಾಗೇ ಸುಮಾರು 51 ಎಂಪಿಎಚ್​​ನಷ್ಟು ವೇಗವಾಗಿ ಗಾಳಿಯೂ ಬೀಸಿತು. ಈ ಗಾಳಿ ಮರಳು, ಧೂಳುಗಳಿಂದ ಕೂಡಿತ್ತು. ಇದರಿಂದ ಅನಾಹುತ ನಡೆದಿದೆ. ಮೃತರ ಹೆಸರುಗಳಿನ್ನೂ ಸರಿಯಾಗಿ ಗೊತ್ತಾಗಿಲ್ಲ ಎಂದೂ ಪಿಡಿಎಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊನೆಗೂ ಯಡಿಯೂರಪ್ಪ ಕೆಳಗಿಳಿಸುವಲ್ಲಿ ಯಶಸ್ಸು ಸಾಧಿಸಿದ ವಿರೋಧಿ ಬಣ; ಸ್ವಾತಂತ್ರ್ಯ ದಿನಕ್ಕೆ ಕರ್ನಾಟಕಕ್ಕೆ ಹೊಸ ಸಿಎಂ ಸಂಭ್ರಮ

Published On - 3:58 pm, Mon, 26 July 21

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ