AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ಗಾಗಿ ಹೋರಾಡಲು ಸ್ವಯಂಪ್ರೇರಿತರಾಗಿ ಮುಂದೆ ಬಂದ 70 ಜಪಾನಿಯರು – ವರದಿ

ಉಕ್ರೇನ್​ನಲ್ಲಿ ದೇಶಕ್ಕಾಗಿ ಹೋರಾಡಲು ನೂರಾರು ಯುವಕರು ಪಣತೊಟ್ಟಿದ್ದಾರೆ. ಈ ನಡುವೆ ಜಪಾನ್​ನ ಸುಮಾರು 70 ಯುವಕರು ಸ್ವಯಂಪ್ರೇರಿತರಾಗಿ ಉಕ್ರೇನ್​ ಪರವಾಗಿ ಹೋರಾಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ. 

ಉಕ್ರೇನ್‌ಗಾಗಿ ಹೋರಾಡಲು ಸ್ವಯಂಪ್ರೇರಿತರಾಗಿ ಮುಂದೆ ಬಂದ 70 ಜಪಾನಿಯರು - ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 02, 2022 | 12:47 PM

Share

ರಷ್ಯಾ ಉಕ್ರೇನ್​ ನಡುವಿನ ಯುದ್ಧ(Russia Ukraine War) ಮುಂದುವರೆದಿದೆ. ಸತತ ಏಳನೇ ದಿನಕ್ಕೆ ಯುದ್ಧ ಕಾಲಿಟ್ಟಿದೆ. ಈಗಾಗಲೇ ಕೀವ್​ ಮತ್ತು ಖಾರ್ಕೀವ್​ಗಳತ್ತ ರಷ್ಯಾ ಸೇನೆ ನುಗ್ಗಿದ್ದು, ನಾಗರಿಕರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ್ದು ದೇಶಕ್ಕಾಗಿ ಹೋರಾಡಲು ನೂರಾರು ಯುವಕರು ಪಣತೊಟ್ಟಿದ್ದಾರೆ. ಈ ನಡುವೆ ಜಪಾನ್ ​(Japan)ನ ಸುಮಾರು 70 ಯುವಕರು ಸ್ವಯಂಪ್ರೇರಿತರಾಗಿ ಉಕ್ರೇನ್​ ಪರವಾಗಿ ಹೋರಾಡಲು ಬಂದಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಅಂತರರಾಷ್ಟ್ರೀಯ ಸೈನ್ಯ ರಚನೆಗೆ ಭಾನುವಾರ ಕರೆ ನೀಡಿದರು, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾಕ್ಕೆ ದೇಶಕ್ಕಾಗಿ ಹೋರಾಡುವಂತೆ ಕರೆ ನೀಡಿದರು. ಸಾಮಾಜಿಕ ಜಾಲತಾಣ ಟ್ವಿಟರ್​ನಲ್ಲಿ ಕರೆ ನೀಡಿದ್ದನ್ನು ಗಮನಿಸಿ ಜಪಾನ್​ನ ಸುಮಾರು 70 ಮಂದಿ ಪುರುಷರು ಉಕ್ರೇನ್​ ಬೆಂಬಲಕ್ಕೆ ನಿಂತಿದ್ದಾರೆ. ಅದರಲ್ಲಿ 50 ಮಂದಿ  ಜಪಾನ್‌ನ ಸ್ವ-ರಕ್ಷಣಾ ಪಡೆಗಳ ಮಾಜಿ ಸದ್ಯರು ಮತ್ತು ಫ್ರೆಂಚ್ ಫಾರಿನ್ ಲೀಜನ್‌ನ ಇಬ್ಬರು ಅನುಭವಿಗಳು – ಸ್ವಯಂಸೇವಕರಾಗಿ ಹೋರಾಡಲು ಅರ್ಜಿ ಸಲ್ಲಿಸಿದ್ದಾರೆ ಎಂದು ಮೈನಿಚಿ ಶಿಂಬುನ್ ದೈನಿಕವು ಟೋಕಿಯೊ ಕಂಪನಿಯನ್ನು ಉಲ್ಲೇಖಿಸಿ ಹೇಳಿದೆ.

ಫೆ,28ರಂದು ಉಕ್ರೇನ್​ ರಾಯಭಾರ ಕಚೇರಿಯು ಜಪಾನ್​ಗೆ ಧನ್ಯವಾದ ಸಲ್ಲಿಸಿದೆ. ಆದರೆ ಒಂದು ನಿಬಂಧನೆಯನ್ನು ವಿಧಿಸಿದೆ. ಅದೇನೆಂದರೆ, ಯುದ್ಧದದಲ್ಲಿ ತೊಡಗಲು ಬಯಸುವವರು ಜಪಾನ್​ನ ಸ್ವರಕ್ಷಣಾ ಪಡೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು ಅಥವಾ ವಿಶೇಷ ತರಬೇತಿ ಪಡೆದಿರಬೇಕು ಎಂದಿದೆ. ಬುಧವಾರ ಜಪಾನ್​ನಲ್ಲಿರುವ ಉಕ್ರೇನ್​ ರಾಯಭಾರ ಕಚೇರಿಯು, ಉಕ್ರೇನ್​ಗಾಗಿ ಐಟಿ, ವೈದ್ಯಕೀಯ ಮತ್ತು ಅಗ್ನಿಶಾಮಕ ದಳದಲ್ಲಿ ಅನುಭವವುಳ್ಳವರು ಬೇಕಾಗಿದ್ದಾರೆ ಎಂದು ಟ್ವೀಟ್​ ಮಾಡಿದೆ. ಆದರೆ ಉಕ್ರೇನ್​ಗೆ ಹೋಗಿಯೇ ಕೆಲಸಮಾಡಬೇಕೆ ಎನ್ನುವ  ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ.

ಜಪಾನ್​ ಸರ್ಕಾರ ಯಾವುದೇ ಕಾರಣಕ್ಕೂ ಉಕ್ರೇನ್​ಗೆ ಪ್ರಯಾಣ ಮಾಡದಿರಿ ಎಂದು ನಾಗರಿಕರಿಗೆ ಸೂಚನೆ ನೀಡಿದೆ. ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸ್ವಯಂ ಸೇವಕರಾಗಿ ಹೊರಟವರಿಗೆ ಎಚ್ಚರಿಕೆ ನೀಡಿದ್ದಾರೆ. ಜತೆಗೆ ಜಪಾನ್​ನಲ್ಲಿರುವ ಉಕ್ರೇನ್​ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ  ಸ್ವಯಂಸೇವಕರನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಿ ಮಾಹಿತಿ ನೀಡಲಾಗುವುದು ಎಂದು ಜಪಾನ್​ ಸರ್ಕಾರ ತಿಳಿಸಿದೆ.

ಇನ್ನೂ ರಷ್ಯಾ ವಿರುದ್ಧ ಹೋರಾಟಕ್ಕೆ ಸ್ಟಾನಿಸ್ಲಾವ್ ಹೋರುನಾ ಕೂಡ ಮುಂದೆ ಬಂದಿದ್ದಾರೆ. ಒಲಿಂಪಿಕ್ ಪದಕ ವಿಜೇತ ಸ್ಟಾನಿಸ್ಲಾವ್  ರಷ್ಯಾ ವಿರುದ್ಧ ಹೋರಾಟಕ್ಕೆ ಕೈಜೋಡಿಸಿದ್ದಾರೆ.  ಸ್ಟಾನಿಸ್ಲಾವ್ ಉಕ್ರೇನ್​ನ ಓಲಂಪಿಕ್ಸ್​ನಲ್ಲಿ ಕಳೆದ ಬಾರಿ ಕಂಚಿನ ಪದಕ ಗೆದ್ದಿದ್ದರು.

ಇದನ್ನೂ ಓದಿ:

Fact Check: ಉಕ್ರೇನ್​ ಮೇಲೆ ರಷ್ಯಾ ಶೆಲ್​ ದಾಳಿ ನಡೆಸಿದ ವಿಡಿಯೋ ವೈರಲ್​: ಇದರ ಅಸಲಿಯತ್ತೇನು?

Published On - 12:40 pm, Wed, 2 March 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ