AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​​ನಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಸಾವು; ಹಲವರಿಗೆ ಗಾಯ

ವೇದಿಕೆ ಎದುರು ಜನಸಂದಣಿ ಹೆಚ್ಚಾಗುತ್ತಿದ್ದಂತೆ ಕೂಗಾಟ, ಕಿರುಚಾಟವೂ ಹೆಚ್ಚಿತು. ಇದರಿಂದ ಅನೇಕರು ಗಾಬರಿಗೊಂಡರು. ಹಲವರು ಗಾಯಗೊಂಡಿದ್ದಾರೆ. ಒಟ್ಟಾರೆ 17 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಯುಎಸ್​​ನಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಸಾವು; ಹಲವರಿಗೆ ಗಾಯ
ಸಂಗೀತ ಕಾರ್ಯಕ್ರಮದ ಚಿತ್ರ
TV9 Web
| Edited By: |

Updated on: Nov 06, 2021 | 1:46 PM

Share

ಯುಎಸ್​ನ ದಕ್ಷಿಣ ಭಾಗದಲ್ಲಿ ನಡೆದಿದ್ದ ಆಸ್ಟ್ರೋವರ್ಲ್ಡ್ ಸಂಗೀತ ಸಮಾರಂಭದಲ್ಲಿ ಪಾಲ್ಗೊಂಡಿದ್ದು ಸುಮಾರು 8 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಹೂಸ್ಟನ್ ಅಗ್ನಿಶಾಮಕ ಮುಖ್ಯಸ್ಥ ಸ್ಯಾಮ್ಯುಯೆಲ್ ಪೆನಾ ಮಾಹಿತಿ ನೀಡಿದ್ದು, ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯ ಮುಂಭಾಗದಲ್ಲಿ ಒಮ್ಮೆಲೇ ಗಲಾಟೆ ಶುರುವಾಗಿದ್ದೇ ಈ ಅವಘಡಕ್ಕೆ ಕಾರಣ ಎಂದಿದ್ದಾರೆ. ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದಂತೆ ವೇದಿಕೆ ಎದುರಲ್ಲೇ ನಿಂತಿದ್ದ ಒಂದಷ್ಟು ಮಂದಿ ನೂಕುನುಗ್ಗಲು ಶುರು ಮಾಡಿದರು. ಜನಸಂದಣಿ ಹೆಚ್ಚಾದಂತೆ ಹಲವರು ಕೆಳಗೆ ಬಿದ್ದರು. ಹೀಗೆ ಸತ್ತವರಲ್ಲಿ ಮೂರ್ನಾಲ್ಕು ಮಂದಿಗೆ ಹೃದಯಸ್ತಂಭನ ಉಂಟಾಗಿದೆ ಎಂದು ಹೇಳಿದ್ದಾರೆ.  

ವೇದಿಕೆ ಎದುರು ಜನಸಂದಣಿ ಹೆಚ್ಚಾಗುತ್ತಿದ್ದಂತೆ ಕೂಗಾಟ, ಕಿರುಚಾಟವೂ ಹೆಚ್ಚಿತು. ಇದರಿಂದ ಅನೇಕರು ಗಾಬರಿಗೊಂಡರು. ಹಲವರು ಗಾಯಗೊಂಡಿದ್ದಾರೆ. ಒಟ್ಟಾರೆ 17 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅದರಲ್ಲೂ 11 ಮಂದಿಗೆ ಹೃದಯಸ್ತಂಭನ ಉಂಟಾಗಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ ಮತ್ತು ಗಾಯಗೊಂಡವರಿಗೆ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದೂ ತಿಳಿಸಿದ್ದಾರೆ. ಸಾವಿಗೆ ನಿಜವಾದ ಕಾರಣ ಸಂಪೂರ್ಣ ವೈದ್ಯಕೀಯ ಪರೀಕ್ಷೆಯ ನಂತರವಷ್ಟೇ ಗೊತ್ತಾಗಲಿದೆ.

ಇದನ್ನೂ ಓದಿ: ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ