AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​​ನ ಮ್ಯಾನ್​ಹಟನ್​​ನಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ; ಇದೊಂದು ತುಚ್ಛ ಕೃತ್ಯವೆಂದ ಭಾರತೀಯ ರಾಯಭಾರಿ ಕಚೇರಿ

ಕಳೆದ ತಿಂಗಳು ಯುಎಸ್​​ನ ಕ್ಯಾಲಿಫೋರ್ನಿಯಾದ ಡೇವಿಸ್​ ನಗರದ ಸೆಂಟ್ರಲ್​ ಪಾರ್ಕ್​ನಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನೂ ಕೂಡ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು. ಕಾಲಿನ ಭಾಗ ಮತ್ತು ಮುಖವನ್ನು ಧ್ವಂಸ ಮಾಡಿದ್ದರು. 

ನ್ಯೂಯಾರ್ಕ್​​ನ ಮ್ಯಾನ್​ಹಟನ್​​ನಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ; ಇದೊಂದು ತುಚ್ಛ ಕೃತ್ಯವೆಂದ ಭಾರತೀಯ ರಾಯಭಾರಿ ಕಚೇರಿ
ಗಾಂಧಿ ಪ್ರತಿಮೆ
TV9 Web
| Updated By: Lakshmi Hegde|

Updated on:Feb 06, 2022 | 1:25 PM

Share

ನ್ಯೂಯಾರ್ಕ್ ಸಿಟಿಯ ಮ್ಯಾನ್​ಹಟನ್​ ಬಳಿಯ ಯೂನಿಯನ್​ ಸ್ಕ್ವಾರ್​​ನಲ್ಲಿದ್ದ 8 ಅಡಿ ಎತ್ತರದ  ಮಹಾತ್ಮ ಗಾಂಧಿ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಇದನ್ನು ಯುಎಸ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತೀವ್ರವಾಗಿ ಖಂಡಿಸಿದ್ದು, ತುಚ್ಛ ಕಾರ್ಯ ಎಂದು ಹೇಳಿದೆ. ಹಾಗೇ, ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸದಿಂದಾಗಿ ಭಾರತೀಯರು ಮತ್ತು ಅಮೆರಿಕದಲ್ಲಿರುವ ಭಾರತೀಯರಿಗೆ ನೋವಾಗಿದೆ ಮತ್ತು ಇದೊಂದು ಶಾಕಿಂಗ್​ ಘಟನೆ ಎಂದು ಹೇಳಿದೆ. 

ಶನಿವಾರ ಬೆಳಗ್ಗೆ (ಯುಎಸ್​ ಕಾಲಮಾನದ ಪ್ರಕಾರ) ಈ ಘಟನೆ ನಡೆದಿದೆ. ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ್ದು ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ನ್ಯೂಯಾರ್ಕ್​​ನಲ್ಲಿರುವ ಭಾರತದ ಕಾನ್ಸುಲೇಟ್​ ಜನರಲ್​ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲ, ಈ ಹೇಯಕೃತ್ಯದ ಬಗ್ಗೆ ಸ್ಥಳೀಯ ಆಡಳಿತದೊಂದಿಗೆ ಚರ್ಚಿಸಲಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುತ್ತದೆ ಎಂದೂ ಹೇಳಿದೆ. ಅಂದಹಾಗೇ, ಈ 8 ಅಡಿ ಎತ್ತರದ ಗಾಂಧಿ ಪ್ರತಿಮೆಯನ್ನು, ಗಾಂಧಿ ಸ್ಮಾರಕ ಅಂತರಾಷ್ಟ್ರೀಯ ಪ್ರತಿಷ್ಠಾನ 1986ರ ಅಕ್ಟೋಬರ್​ 2ರಂದು, ಮಹಾತ್ಮ ಗಾಂಧಿಯವರ 117ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ  ನೀಡಿತ್ತು. ಅಂದಿನ ಸಮಾರಂಭದಲ್ಲಿ ಅಮೆರಿಕದ ನಾಗರಿಕ ಹಕ್ಕುಗಳ ಪರ ಹೋರಾಟಗಾರ ಬೇಯಾರ್ಡ್ ರಸ್ಟಿನ್ ಭಾಷಣವನ್ನೂ ಮಾಡಿದ್ದರು.

ಕಳೆದ ತಿಂಗಳು ಯುಎಸ್​​ನ ಕ್ಯಾಲಿಫೋರ್ನಿಯಾದ ಡೇವಿಸ್​ ನಗರದ ಸೆಂಟ್ರಲ್​ ಪಾರ್ಕ್​ನಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನೂ ಕೂಡ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು. ಕಾಲಿನ ಭಾಗ ಮತ್ತು ಮುಖವನ್ನು ಧ್ವಂಸ ಮಾಡಿದ್ದರು.  ಅದು ಆರು ಅಡಿ ಎತ್ತರದ, 294 ಕೆಜಿ ತೂಕದ ಕಂಚಿನ ಪ್ರತಿಮೆಯಾಗಿತ್ತು.  ಈ ಪ್ರತಿಮೆಯನ್ನು ಭಾರತ ಸರ್ಕಾರ ಡೇವಿಸ್​ ನಗರಕ್ಕೆ ನೀಡಿತ್ತು. ಇದನ್ನು ಸ್ಥಾಪಿಸುವಾಗ ಗಾಂಧಿ ವಿರೋಧಿ ಮತ್ತು ಭಾರತ ವಿರೋಧಿ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು. ಅದೆಲ್ಲದರ ಮಧ್ಯೆಯೂ ನಗರ ಆಡಳಿತ ಯಶಸ್ವಿಯಾಗಿ ಗಾಂಧಿ ಪ್ರತಿಮೆ ಸ್ಥಾಪನೆ ಮಾಡಿತ್ತು.

ಇದನ್ನೂ ಓದಿ:  ಮಕ್ಕಳ ಅತಿಯಾದ ಮೊಬೈಲ್​ ಬಳಕೆಯ ಅಭ್ಯಾಸ ತಪ್ಪಿಸಲು ಹೀಗೆ ಮಾಡಿ

Published On - 1:24 pm, Sun, 6 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ