AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನ ಶಾಲೆಯ 80 ಬಾಲಕಿಯರಿಗೆ ವಿಷ ಪ್ರಾಶನ, ಆಸ್ಪತ್ರೆಗೆ ದಾಖಲು

ಅಫ್ಘಾನಿಸ್ತಾನದ ಶಾಲೆಯೊಂದರ 80 ಬಾಲಕಿಯರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿವೆ.

Afghanistan: ಅಫ್ಘಾನಿಸ್ತಾನ ಶಾಲೆಯ 80 ಬಾಲಕಿಯರಿಗೆ ವಿಷ ಪ್ರಾಶನ, ಆಸ್ಪತ್ರೆಗೆ ದಾಖಲು
ಅಫ್ಘಾನಿಸ್ತಾನ ಬಾಲಕಿಯರು, ಸಾಂದರ್ಭಿಕ ಚಿತ್ರImage Credit source: BBC
ನಯನಾ ರಾಜೀವ್
|

Updated on: Jun 05, 2023 | 8:38 AM

Share

ಅಫ್ಘಾನಿಸ್ತಾನದ ಶಾಲೆಯೊಂದರ 80 ಬಾಲಕಿಯರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿವೆ. ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಮಾತನಾಡಿ, ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ ಶಾಲೆಯಲ್ಲಿ 17 ಮಕ್ಕಳು ವಿಷ ಸೇವಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ. ಎಲ್ಲಾ ವಿದ್ಯಾರ್ಥಿನಿಯರ ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ವಿಷ ಸೇವಿಸಲು ಕಾರಣವೇನು, ಅವರ ಊಟದಲ್ಲಿ ಯಾರಾದರೂ ವಿಷ ಹಾಕಿದ್ದರೇ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಕಾಲೇಜುಗಳ ತರಗತಿ ಆರಂಭ; ಗಂಡು- ಹೆಣ್ಣು ಮಕ್ಕಳ ನಡುವೆ ಪರದೆ ಹಾಕಿ ಪಾಠ

2021ರ ಆಗಸ್ಟ್​ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ, ಅಫ್ಘಾನ್ ಮಹಿಳೆಯರ ಸ್ವಾತಂತ್ರ್ಯವನ್ನೇ ಗುರಿಯಾಗಿಸಿದರು. ಹೆಣ್ಣುಮಕ್ಕಳು 6 ನೇ ತರಗತಿಗಿಂತ ಹೆಚ್ಚು ಓದುವಂತಿಲ್ಲ, ಕೆಲಸ ಮಾಡುವಂತಿಲ್ಲ ಎನ್ನುವ ಹೊಸ ಕಾನೂನನ್ನು ಜಾರಿಗೆ ತಂದರು.

ಈ ಘಟನೆಯಲ್ಲಿ ವಿಷಕಾರಿ ಹೊಗೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ, ಈ ಘಟನೆಯ ಹಿಂದೆ ಯಾರಿರಬಹುದು ಯಾವ ರಾಸಾಯನಿಕಗಳನ್ನು ಬಳಸಿದ್ದಾರೆ, ಕಾರಣವೇನು ಎಂಬುದರ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ