AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ಮಕ್ಕಳು ಕಿಡ್ನ್ಯಾಪ್​ ಆಗಿ ತಿಂಗಳಾಯಿತು..ನಿಲ್ಲುತ್ತಿಲ್ಲ ಪಾಲಕರ ರೋಧನೆ; ಹಣಕ್ಕಾಗಿ ದುಷ್ಕರ್ಮಿಗಳ ಬೇಡಿಕೆ

Nigeria: ಇದೀಗ ಅಪಹರಣಗೊಂಡಿರುವ ಮಕ್ಕಳು ಕಡುನಾ ಜಿಲ್ಲೆಯ ಬೆಥೆಲ್​ ಬಾಪ್ಟಿಸ್ಟ್​ ಹೈಸ್ಕೂಲ್​ನವರಾಗಿದ್ದಾರೆ. ಕಳೆದ ಡಿಸೆಂಬರ್​ನಿಂದ ಒಂದಲ್ಲ ಒಂದು ಶಾಲೆಯ ಮಕ್ಕಳನ್ನು ಅಪಹರಿಸಿ, ಹಣದೋಚಲಾಗುತ್ತಿದೆ.

80 ಮಕ್ಕಳು ಕಿಡ್ನ್ಯಾಪ್​ ಆಗಿ ತಿಂಗಳಾಯಿತು..ನಿಲ್ಲುತ್ತಿಲ್ಲ ಪಾಲಕರ ರೋಧನೆ; ಹಣಕ್ಕಾಗಿ ದುಷ್ಕರ್ಮಿಗಳ ಬೇಡಿಕೆ
ಅಪಹರಣಗೊಂಡ ಮಕ್ಕಳ ಪಾಲಕರ ದುಃಖ
TV9 Web
| Edited By: |

Updated on: Aug 05, 2021 | 3:11 PM

Share

ನೈಜೀರಿಯಾದ ಉತ್ತರದಲ್ಲಿರುವ ವಸತಿ ಶಾಲೆಯೊಂದರಿಂದ ದುಷ್ಕರ್ಮಿಗಳು 80 ಮಕ್ಕಳನ್ನು ಅಪಹರಣ ಮಾಡಿ ಒಂದು ತಿಂಗಳೇ ಕಳೆಯಿತು. ಪಾಲಕರ ರೋಧನೆ ನೋಡಲಾಗುತ್ತಿಲ್ಲ. ಆದರೆ ಅಪಹರಣಕಾರರು ಅವರನ್ನಿನ್ನೂ ಬಿಟ್ಟಿಲ್ಲ. ಈಗ ಅಪಹರಣಾಕಾರರು ಮಕ್ಕಳನ್ನು ಬಿಡಬೇಕು ಎಂದರೆ ಹಣ ಬೇಕು ಎನ್ನುತ್ತಿದ್ದಾರೆ. ಪ್ರತಿ ಮಗುವಿಗೆ 1 ಮಿಲಿಯನ್​ ನೈರಾ (1.50 ಲಕ್ಷ ರೂ.ಗೂ ಅಧಿಕ)ಗಳನ್ನು ವಿಮೋಚನಾ ಮೊತ್ತವನ್ನಾಗಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಮಕ್ಕಳ ಬಿಡುಗಡೆಗಾಗಿ ಪಾದ್ರಿಯೊಬ್ಬರು ಮಧ್ಯಸ್ಥಿಕೆ ವಹಿಸಿದ್ದಾರೆ. ಅವರ ಮೂಲಕವೇ ಅಪಹರಣಕಾರರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಇದೀಗ ಅಪಹರಣಗೊಂಡಿರುವ ಮಕ್ಕಳು ಕಡುನಾ ಜಿಲ್ಲೆಯ ಬೆಥೆಲ್​ ಬಾಪ್ಟಿಸ್ಟ್​ ಹೈಸ್ಕೂಲ್​ನವರಾಗಿದ್ದಾರೆ. ಕಳೆದ ಡಿಸೆಂಬರ್​ನಿಂದ ಒಂದಲ್ಲ ಒಂದು ಶಾಲೆಯ ಮಕ್ಕಳನ್ನು ಅಪಹರಿಸಿ, ಹಣದೋಚಲಾಗುತ್ತಿದೆ. ಇದೀಗ ಮಕ್ಕಳ ಅಪಹರಣ ನಡೆದ 10ನೇ ಶಾಲೆ ಇದಾಗಿದೆ. ಒಟ್ಟು 80 ವಿದ್ಯಾರ್ಥಿಗಳು ಅಪಹರಣ ಆಗಿದ್ದಾರೆ. ಪ್ರತಿ ವಿದ್ಯಾರ್ಥಿಗೆ 1 ಮಿಲಿಯನ್​ ನೈರಾಗಳಷ್ಟು ಹಣ ಬೇಕು ಎಂದು ದುಷ್ಕರ್ಮಿಗಳು ಕೇಳುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಶಾಲೆಯಿಂದ ಒಟ್ಟು 108 ವಿದ್ಯಾರ್ಥಿಗಳನ್ನು ಅಪಹರಣ ಮಾಡಲಾಗಿತ್ತು. ಕಿಡ್ನ್ಯಾಪ್​ ಮಾಡಿದ ಎರಡೇ ದಿನಕ್ಕೆ 28 ವಿದ್ಯಾರ್ಥಿಗಳನ್ನು ಅವರು ಬಿಟ್ಟರು. ಆದರೆ ಉಳಿದ 80 ಮಂದಿ ಅವರ ಬಳಿಯೇ ಇದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಧರ್ಮಗುರು ರೆವರೆಂಡ್ ಇಟೆ ಜೋಸೆಫ್ ಹಯಾಬ್ ತಿಳಿಸಿದ್ದಾರೆ ಎಂದು ರಾಯಿಟರ್ಸ್​ ವರದಿ ಮಾಡಿದೆ.

ಉತ್ತರ ನೈಜೀರಿಯಾದಲ್ಲಿ ಈತ್ತೀಚೆಗೆ ಮಕ್ಕಳನ್ನು ಅಪಹರಣ ಮಾಡುವ ಕೃತ್ಯ ತುಂಬ ಹೆಚ್ಚಾಗುತ್ತಿದೆ. ಶಸ್ತ್ರಧಾರಿಗಳ ಗುಂಪು ಹೀಗೆ ಶಾಲೆಗಳಿಂದ ಮಕ್ಕಳನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದೆ. ಇದನ್ನು ಮೊದಲು ಪ್ರಾರಂಭಿಸಿದ್ದು ನೈಜೀರಿಯಾದ ಜಿಹಾದಿಗಳ ಗುಂಪು ಬೋಕೋ ಹರಾಮ್​. ಈಗೀಗ ಹಣಕ್ಕಾಗಿ ಕಿಡ್ನ್ಯಾಪ್​ ಮಾಡುವ ದರೋಡೆಕೋರರ ಗುಂಪು ಹಲವಾರು ಹುಟ್ಟುಕೊಂಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Arvind Bellad: ನಾಳೆ ಧಾರವಾಡ ಬಂದ್ ಇಲ್ಲ; ಶಾಸಕ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ದೊರೆಯದ್ದಕ್ಕೆ ಬಂದ್ ಎಂದು ವೈರಲ್ ಆದದ್ದು ಸುಳ್ಳುಸುದ್ದಿ

80 schoolchildren Kidnapped In Nigeria Kidnappers Demand Money to release

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ