AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa Church: ದಕ್ಷಿಣ ಆಫ್ರಿಕಾದ ಚರ್ಚ್​ ಪ್ರಾರ್ಥನೆ ವೇಳೆ ಪ್ರವಾಹ; 9 ಜನ ಸಾವು, 8 ಮಂದಿ ನಾಪತ್ತೆ

ಪ್ರವಾಹದಲ್ಲಿ ಮೃತಪಟ್ಟವರು ಮತ್ತು ನಾಪತ್ತೆಯಾದವರೆಲ್ಲರೂ ಶನಿವಾರ ನದಿಯ ಉದ್ದಕ್ಕೂ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

South Africa Church: ದಕ್ಷಿಣ ಆಫ್ರಿಕಾದ ಚರ್ಚ್​ ಪ್ರಾರ್ಥನೆ ವೇಳೆ ಪ್ರವಾಹ; 9 ಜನ ಸಾವು, 8 ಮಂದಿ ನಾಪತ್ತೆ
ದಕ್ಷಿಣ ಆಫ್ರಿಕಾದಲ್ಲಿ ಪ್ರವಾಹ
TV9 Web
| Edited By: |

Updated on: Dec 05, 2022 | 9:00 AM

Share

ಜೋಹಾನ್ಸ್​ಬರ್ಗ್: ದಕ್ಷಿಣ ಆಫ್ರಿಕಾದ (South Africa) ಜೋಹಾನ್ಸ್‌ಬರ್ಗ್‌ನ ಚರ್ಚ್​ ಪ್ರಾರ್ಥನೆ ವೇಳೆ ಜುಕ್ಸ್‌ಕೇಯ್ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ (Flood) ಮುಳುಗಿ, ದಕ್ಷಿಣ ಆಫ್ರಿಕಾದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. 8 ಜನರು ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರು ಮತ್ತು ನಾಪತ್ತೆಯಾದವರೆಲ್ಲರೂ ಶನಿವಾರ ನದಿಯ ಉದ್ದಕ್ಕೂ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡಾಗ ಇಬ್ಬರ ಶವಗಳು ಪತ್ತೆಯಾಗಿದ್ದು, ಇದುವರೆಗೂ ಒಟ್ಟು 9 ಶವಗಳು ಪತ್ತೆಯಾಗಿವೆ ಎಂದು ರಕ್ಷಣಾ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡಗಳು ಪ್ರವಾಹದ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಲು ತೆರಳಿದ್ದಾರೆ.

ಇದನ್ನೂ ಓದಿ: Big News: ವೆನೆಜುವೆಲಾದಲ್ಲಿ ಭೀಕರ ಪ್ರವಾಹ, ಭೂಕುಸಿತ; 22 ಜನ ಸಾವು, 50 ಮಂದಿ ನಾಪತ್ತೆ

ಧಾರ್ಮಿಕ ಗುಂಪುಗಳು ಬ್ಯಾಪ್ಟಿಸಮ್ ಮತ್ತು ಧಾರ್ಮಿಕ ಶುದ್ಧೀಕರಣಕ್ಕಾಗಿ ಜೋಹಾನ್ಸ್‌ಬರ್ಗ್‌ನ ಪೂರ್ವದಲ್ಲಿರುವ ಅಲೆಕ್ಸಾಂಡ್ರಾದಂತಹ ಹಿಂದಿನ ಟೌನ್‌ಶಿಪ್‌ಗಳನ್ನು ನಡೆಸುವ ಜಕ್ಸ್‌ಕೀ ನದಿಯ ಉದ್ದಕ್ಕೂ ಆಗಾಗ ಧಾರ್ಮಿಕ ಸಭೆ ನಡೆಯುತ್ತದೆ. ಆ ಪ್ರದೇಶದಲ್ಲಿ ಪ್ರವಾಹ ಉಂಟಾಗುವ ಬಗ್ಗೆ ಜನರಿಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಈ ದುರಂತ ಸಂಭವಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ