AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh: ಕರಾವಳಿ ಭಾಗದ ಚಂಡಮಾರುತಕ್ಕೆ 9ಜನ ಸಾವು, ಭಾರತಕ್ಕೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬಾಂಗ್ಲಾದೇಶದ ಕರಾವಳಿಯಲ್ಲಿ ಭಾಗದಲ್ಲಿ ಭಾರೀ ಚಂಡಮಾರುತ ವರದಿಯಾಗಿದೆ. ಇದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ, ಅನೇಕ ಮನೆಗಳು ನಾಶವಾಗಿದೆ.

Bangladesh: ಕರಾವಳಿ ಭಾಗದ ಚಂಡಮಾರುತಕ್ಕೆ 9ಜನ ಸಾವು, ಭಾರತಕ್ಕೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 25, 2022 | 11:15 AM

Share

ಢಾಕಾ: ಬಾಂಗ್ಲಾದೇಶದ ಕರಾವಳಿಯಲ್ಲಿ ಭಾಗದಲ್ಲಿ ಭಾರೀ ಚಂಡಮಾರುತ ವರದಿಯಾಗಿದೆ. ಇದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ, ಅನೇಕ ಮನೆಗಳು ನಾಶವಾಗಿದೆ. ಮರಗಳು ಧರೆಗುರುಳಿದೆ. ರಸ್ತೆ, ವಿದ್ಯುತ್ ಮತ್ತು ಸಂವಹನ ಸಂಪರ್ಕಗಳು ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿತ್ರಾಂಗ್ ಚಂಡಮಾರುತವು ಪಶ್ಚಿಮ ಕರಾವಳಿಯಲ್ಲಿ ಭೂಕುಸಿತವನ್ನು ಉಂಟು ಮಾಡುವ ಮೊದಲು ಅಲ್ಲಿಯ ಜನರನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ. ಆದರೆ ಸ್ಥಳಾಂತರ ಮಾಡುವ ಮೊದಲು ಅನೇಕರು ಜೀವನವನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕ ಹಾನಿಗಳು ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂಡಮಾರುತವು ಬಂಗಾಳ ಕೊಲ್ಲಿಯಿಂದ ಮುಂಜಾನೆ 88 kph (55 mph) ವೇಗದಲ್ಲಿ ಗಾಳಿ ಬೀಸಿತು ಮತ್ತು ಸುಮಾರು 3 m (10 ಅಡಿ) ಚಂಡಮಾರುತದ ಉಲ್ಬಣಗೊಂಡು ತಗ್ಗು ಪ್ರದೇಶದ ಕರಾವಳಿ ಪ್ರದೇಶಗಳನ್ನು ಪ್ರವಾಹ ಬಂದಿದೆ. ವಿದ್ಯುತ್ ಮತ್ತು ದೂರವಾಣಿ ಸಂಪರ್ಕಗಳು ಹೆಚ್ಚಾಗಿ ಕಡಿತಗೊಂಡಿರುವ ಕಾರಣ ಕರಾವಳಿ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಅಲ್ಲಿ ಜನರು ಕತ್ತಲೆಯಲ್ಲಿಯೇ ಜೀವನ ಕಳೆಯುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ನೇಯ ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಯಾವುದೇ ದೊಡ್ಡ ಹಾನಿಯಾಗಿಲ್ಲ, ಅಲ್ಲಿ ನೆರೆಯ ಮ್ಯಾನ್ಮಾರ್‌ನಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನಾಂಗೀಯ ರೋಹಿಂಗ್ಯಾ ನಿರಾಶ್ರಿತರು ಆಶ್ರಯದಲ್ಲಿ ವಾಸಿಸುತ್ತಿದ್ದಾರೆ. ಶಿಬಿರಗಳಿಂದ ಬಂಗಾಳಕೊಲ್ಲಿಯ ಪ್ರವಾಹ ಪೀಡಿತ ದ್ವೀಪಕ್ಕೆ ತೆರಳಿರುವ ಸುಮಾರು 33,000 ರೋಹಿಂಗ್ಯಾ ನಿರಾಶ್ರಿತರಿಗೆ ಮನೆಯೊಳಗೆ ಇರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ರಾಜಧಾನಿ ಢಾಕಾದ ಬೀದಿಗಳಲ್ಲಿ ಭಾರೀ ಮಳೆ ಸುರಿದಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಮಾಡಲು ಅಡ್ಡಿಪಡಿಯಾಗಿದೆ. ಚಂಡಮಾರುತವು ಪೂರ್ವ ಭಾರತದ ರಾಜ್ಯವಾದ ಪಶ್ಚಿಮ ಬಂಗಾಳದ ಮೇಲೂ ಪರಿಣಾಮ ಬೀರಿದೆ. ದಕ್ಷಿಣ ಏಷ್ಯಾವು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ತೀವ್ರ ಹವಾಮಾನ ವಿಕೋಪವನ್ನು ಅನುಭವಿಸಿದ್ದು ದೊಡ್ಡ ಪ್ರಮಾಣದ ಹಾನಿಯನ್ನುಂಟುಮಾಡುತ್ತಿದೆ. ಹವಾಮಾನ ಬದಲಾವಣೆಯು ವಿಶೇಷವಾಗಿ ಜನನಿಬಿಡ ಪ್ರದೇಶ ಬಾಂಗ್ಲಾದೇಶದಂತಹ ಸ್ಥಳಗಳಲ್ಲಿ ಹೆಚ್ಚಿನ ಅನಾಹುತಗಳಿಗೆ ಕಾರಣವಾಗಬಹುದು ಎಂದು ಪರಿಸರವಾದಿಗಳು ಎಚ್ಚರಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ