AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇರಾಕ್​ನಲ್ಲಿ ಮಿನಿ ಬಸ್ ಅಪಘಾತ; ಬೆಂಕಿ ಹೊತ್ತಿಕೊಂಡು 9 ಶಿಕ್ಷಕರು ಸೇರಿದಂತೆ 11 ಜನ ಸಾವು

41 ಮಿಲಿಯನ್ ಜನರಿರುವ ಇರಾಕ್‌ನಲ್ಲಿ ಕಳೆದ ವರ್ಷ ಸುಮಾರು 1,000 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

Crime News: ಇರಾಕ್​ನಲ್ಲಿ ಮಿನಿ ಬಸ್ ಅಪಘಾತ; ಬೆಂಕಿ ಹೊತ್ತಿಕೊಂಡು 9 ಶಿಕ್ಷಕರು ಸೇರಿದಂತೆ 11 ಜನ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 16, 2022 | 3:03 PM

Share

ನವದೆಹಲಿ: ರಂಜಾನ್ (Ramadan) ಊಟ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಗ್ದಾದ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಶಾಲಾ ಶಿಕ್ಷಕರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ ಎಂದು ಇರಾಕ್​ನ ಅಧಿಕಾರಿಗಳು ತಿಳಿಸಿದ್ದಾರೆ. ಶಿಯಾಗಳ ಪವಿತ್ರ ನಗರವಾದ ಕರ್ಬಲಾದಿಂದ ಮಿನಿಬಸ್‌ನಲ್ಲಿ ರಂಜಾನ್ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿಯ ಸುಮಾರಿಗೆ ಬ್ಯಾಬಿಲೋನ್ ಪ್ರಾಂತ್ಯದಲ್ಲಿ ಅಪಘಾತ (Accident) ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅತಿಯಾದ ವೇಗ ಮತ್ತು ಹಿಂದಿದ್ದ ವಾಹನದ ಚಾಲಕನ ಗಮನ ಬೇರೆಡೆ ಹೋಗಿದ್ದರಿಂದ ಅವರ ವಾಹನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ರಸ್ತೆ ಸಂಚಾರ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಅಪಘಾತದ ವೇಳೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಘರ್ಷ, ನಿರ್ಲಕ್ಷ್ಯ ಮತ್ತು ಸ್ಥಳೀಯ ಭ್ರಷ್ಟಾಚಾರವು ತೈಲ-ಸಮೃದ್ಧ ಇರಾಕ್‌ನ ರಸ್ತೆಗಳು ಮತ್ತು ಸೇತುವೆಗಳನ್ನು ಒಳಗೊಂಡಂತೆ ಮೂಲಸೌಕರ್ಯವನ್ನು ದುರುಪಯೋಗಪಡಿಸಿಕೊಂಡಿದೆ. ಇಲ್ಲಿನ ಹಲವು ರಸ್ತೆಗಳು ಹೊಂಡಗಳಿಂದ ಕೂಡಿದ್ದು, ರಾತ್ರಿ ವೇಳೆ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿರುತ್ತವೆ. ಇದರಿಂದ ಅಪಘಾತದ ಸಂಖ್ಯೆಯೂ ಹೆಚ್ಚಾಗಿದೆ.

41 ಮಿಲಿಯನ್ ಜನರಿರುವ ಇರಾಕ್‌ನಲ್ಲಿ ಕಳೆದ ವರ್ಷ ಸುಮಾರು 1,000 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಂಚಾರ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

Shocking Video: 2 ಟ್ರಕ್​​ಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!