AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 18, 2020 | 7:33 PM

Share

ಕಾಬೂಲ್​: ಆಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ, ಸಾವು ಹೊಸದಲ್ಲ. ಆದರೆ ಈ ಬಾರಿ ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಹೊತ್ತಲ್ಲಿ ಆಟೊರಿಕ್ಷಾವೊಂದರ ಮೇಲೆ ಬಾಂಬ್​ ದಾಳಿ ನಡೆದಿದೆ. ಮಕ್ಕಳಿಗೆ ಅಗತ್ಯ ಇರುವ ಕೆಲವು ವಸ್ತುಗಳಿದ್ದ ಆಟೊರಿಕ್ಷಾವನ್ನು ಮಕ್ಕಳು ಸುತ್ತುವರಿದಿದ್ದರು. ಆ ಹೊತ್ತಲ್ಲೇ ಬಾಂಬ್​ ದಾಳಿಯಾಗಿದ್ದು, 11 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಘಜನಿ ಪ್ರಾಂತ್ಯದ ರಾಜ್ಯಪಾಲರ ಕಚೇರಿ ಕಚೇರಿ ವಕ್ತಾರ ವಾಹಿದುಲ್ಲಾ ಜುಮಾಝಾಡಾ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಏರಬಹುದು. ಸದ್ಯಕ್ಕೆ ಯಾವ ಉಗ್ರಸಂಘಟನೆಗಳೂ ದಾಳಿ ಹೊಣೆಯನ್ನು ಹೊತ್ತುಕೊಂಡಿಲ್ಲ. ಮಕ್ಕಳನ್ನೇ ಗುರಿಯಾಗಿಸಿಕೊಂಡು ಯಾಕೆ ಬಾಂಬ್​ ದಾಳಿ ನಡೆಸಲಾಯಿತು ಎಂಬ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ವಾಹಿದುಲ್ಲಾ ತಿಳಿಸಿದ್ದಾರೆ.

ಶಾಂತಿಸ್ಥಾಪನೆಗಾಗಿ ತಾಲಿಬಾನಿಗಳು​ ಮತ್ತ ಅಫ್ಗಾನಿಸ್ತಾನ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದೆ. ಹಿಂಸಾಚಾರ ಕಡಿಮೆ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿದ್ದರೂ ಇತ್ತೀಚಿನ ದಿನಗಳಲ್ಲಿ ಬಾಂಬ್ ದಾಳಿ, ಹಿಂಸೆ ಮತ್ತಷ್ಟು ಹೆಚ್ಚಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?