AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 18, 2020 | 7:33 PM

Share

ಕಾಬೂಲ್​: ಆಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ, ಸಾವು ಹೊಸದಲ್ಲ. ಆದರೆ ಈ ಬಾರಿ ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಹೊತ್ತಲ್ಲಿ ಆಟೊರಿಕ್ಷಾವೊಂದರ ಮೇಲೆ ಬಾಂಬ್​ ದಾಳಿ ನಡೆದಿದೆ. ಮಕ್ಕಳಿಗೆ ಅಗತ್ಯ ಇರುವ ಕೆಲವು ವಸ್ತುಗಳಿದ್ದ ಆಟೊರಿಕ್ಷಾವನ್ನು ಮಕ್ಕಳು ಸುತ್ತುವರಿದಿದ್ದರು. ಆ ಹೊತ್ತಲ್ಲೇ ಬಾಂಬ್​ ದಾಳಿಯಾಗಿದ್ದು, 11 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಘಜನಿ ಪ್ರಾಂತ್ಯದ ರಾಜ್ಯಪಾಲರ ಕಚೇರಿ ಕಚೇರಿ ವಕ್ತಾರ ವಾಹಿದುಲ್ಲಾ ಜುಮಾಝಾಡಾ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಏರಬಹುದು. ಸದ್ಯಕ್ಕೆ ಯಾವ ಉಗ್ರಸಂಘಟನೆಗಳೂ ದಾಳಿ ಹೊಣೆಯನ್ನು ಹೊತ್ತುಕೊಂಡಿಲ್ಲ. ಮಕ್ಕಳನ್ನೇ ಗುರಿಯಾಗಿಸಿಕೊಂಡು ಯಾಕೆ ಬಾಂಬ್​ ದಾಳಿ ನಡೆಸಲಾಯಿತು ಎಂಬ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ವಾಹಿದುಲ್ಲಾ ತಿಳಿಸಿದ್ದಾರೆ.

ಶಾಂತಿಸ್ಥಾಪನೆಗಾಗಿ ತಾಲಿಬಾನಿಗಳು​ ಮತ್ತ ಅಫ್ಗಾನಿಸ್ತಾನ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದೆ. ಹಿಂಸಾಚಾರ ಕಡಿಮೆ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿದ್ದರೂ ಇತ್ತೀಚಿನ ದಿನಗಳಲ್ಲಿ ಬಾಂಬ್ ದಾಳಿ, ಹಿಂಸೆ ಮತ್ತಷ್ಟು ಹೆಚ್ಚಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ