AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್

ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ...

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್
ಇಮ್ರಾನ್ ಖಾನ್
TV9 Web
| Edited By: |

Updated on: May 06, 2022 | 8:20 PM

Share

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)  ಮತ್ತೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್ ರೆಕಾರ್ಡಿಂಗ್‌ನ ಕ್ಲಿಪ್‌ವೊಂದರಲ್ಲಿ ಇಮ್ರಾನ್ ಖಾನ್ ಅವರು ಯುನೈಟೆಡ್ ಕಿಂಗ್‌ಡಂನಲ್ಲಿ (United Kingdom) ತಮ್ಮ ಜೀವನವನ್ನು ವಿವರಿಸುತ್ತಾ ಹೇಳಿದ ಮಾತೊಂದು ಈ ವೈರಲ್ ಆಗಿದೆ. “ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂದು ಖಾನ್ ಹೇಳಿದ್ದಾರೆ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂಬ ವಾಕ್ಯವೇ ಈಗ ವೈರಲ್ ಆಗಿರುವುದು. ಇದು ಪಾಕಿಸ್ತಾನ ಮೂಲದ ಕಂಟೆಂಟ್ ಕ್ರಿಯೇಟರ್ ಜುನೈದ್ ಅಕ್ರಮ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಒಂದು ತುಣುಕು ಇದಾಗಿದೆ. ದುಬೈನಿಂದ ಪಾಕಿಸ್ತಾನಕ್ಕೆ ಬಂದಿದ್ದ ಅಕ್ರಮ್ ಗಂಜಿಸ್ವಾಗ್ ಎಂಬ ಹೆಸರಿನ ಇನ್​​ಸ್ಟಾಗ್ರಾಮ್​​  ಹ್ಯಾಂಡಲ್ ಅನ್ನು ಸಹ ನಡೆಸುತ್ತಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳಾದ ಮುಝಮ್ಮಿಲ್ ಹಸನ್ ಮತ್ತು ತಲ್ಹಾ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಪೂರ್ತಿ ವಿಡಿಯೊವನ್ನು ಖಾನ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಮತದ ಮೂಲಕ ಏಪ್ರಿಲ್ 10 ರಂದು ಖಾನ್ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ದೇಶದ ಸಂಸತ್ತಿನಿಂದ ಹೊರಹಾಕಲ್ಪಟ್ಟ ಮೊದಲ ಪಾಕಿಸ್ತಾನಿ ಪ್ರಧಾನ ಮಂತ್ರಿಯಾಗಿದ್ದಾರೆ ಖಾನ್.

ಕ್ರಿಕೆಟಿಗ, ರಾಜಕಾರಣಿ ಪಾಕಿಸ್ತಾನದಲ್ಲಿ ತನ್ನನ್ನು ಹೊರಹಾಕಲು ರಾಜಕೀಯ ವಿರೋಧಿಗಳು ಅಮೆರಿಕ ಜೊತೆ ಸೇರಿಕೊಂಡಿದ್ದಾರೆ ಎಂದು ಪದೇ ಪದೇ ಆರೋಪಿಸಿದ್ದಾರೆ. ಆದರೆ ಅವರು ಇದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಮತ್ತು ವಾಷಿಂಗ್ಟನ್ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಬಲವಾಗಿ ನಿರಾಕರಿಸಿದೆ. ಖಾನ್ ಅವರು ಬೇಗನೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.ಆದರೆ ದೇಶದ ಚುನಾವಣಾ ಆಯೋಗವು ಮೇ 2023 ರ ಮೊದಲು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು