AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್

ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ...

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್
ಇಮ್ರಾನ್ ಖಾನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 06, 2022 | 8:20 PM

Share

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)  ಮತ್ತೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್ ರೆಕಾರ್ಡಿಂಗ್‌ನ ಕ್ಲಿಪ್‌ವೊಂದರಲ್ಲಿ ಇಮ್ರಾನ್ ಖಾನ್ ಅವರು ಯುನೈಟೆಡ್ ಕಿಂಗ್‌ಡಂನಲ್ಲಿ (United Kingdom) ತಮ್ಮ ಜೀವನವನ್ನು ವಿವರಿಸುತ್ತಾ ಹೇಳಿದ ಮಾತೊಂದು ಈ ವೈರಲ್ ಆಗಿದೆ. “ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂದು ಖಾನ್ ಹೇಳಿದ್ದಾರೆ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂಬ ವಾಕ್ಯವೇ ಈಗ ವೈರಲ್ ಆಗಿರುವುದು. ಇದು ಪಾಕಿಸ್ತಾನ ಮೂಲದ ಕಂಟೆಂಟ್ ಕ್ರಿಯೇಟರ್ ಜುನೈದ್ ಅಕ್ರಮ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಒಂದು ತುಣುಕು ಇದಾಗಿದೆ. ದುಬೈನಿಂದ ಪಾಕಿಸ್ತಾನಕ್ಕೆ ಬಂದಿದ್ದ ಅಕ್ರಮ್ ಗಂಜಿಸ್ವಾಗ್ ಎಂಬ ಹೆಸರಿನ ಇನ್​​ಸ್ಟಾಗ್ರಾಮ್​​  ಹ್ಯಾಂಡಲ್ ಅನ್ನು ಸಹ ನಡೆಸುತ್ತಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳಾದ ಮುಝಮ್ಮಿಲ್ ಹಸನ್ ಮತ್ತು ತಲ್ಹಾ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಪೂರ್ತಿ ವಿಡಿಯೊವನ್ನು ಖಾನ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಮತದ ಮೂಲಕ ಏಪ್ರಿಲ್ 10 ರಂದು ಖಾನ್ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ದೇಶದ ಸಂಸತ್ತಿನಿಂದ ಹೊರಹಾಕಲ್ಪಟ್ಟ ಮೊದಲ ಪಾಕಿಸ್ತಾನಿ ಪ್ರಧಾನ ಮಂತ್ರಿಯಾಗಿದ್ದಾರೆ ಖಾನ್.

ಕ್ರಿಕೆಟಿಗ, ರಾಜಕಾರಣಿ ಪಾಕಿಸ್ತಾನದಲ್ಲಿ ತನ್ನನ್ನು ಹೊರಹಾಕಲು ರಾಜಕೀಯ ವಿರೋಧಿಗಳು ಅಮೆರಿಕ ಜೊತೆ ಸೇರಿಕೊಂಡಿದ್ದಾರೆ ಎಂದು ಪದೇ ಪದೇ ಆರೋಪಿಸಿದ್ದಾರೆ. ಆದರೆ ಅವರು ಇದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಮತ್ತು ವಾಷಿಂಗ್ಟನ್ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಬಲವಾಗಿ ನಿರಾಕರಿಸಿದೆ. ಖಾನ್ ಅವರು ಬೇಗನೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.ಆದರೆ ದೇಶದ ಚುನಾವಣಾ ಆಯೋಗವು ಮೇ 2023 ರ ಮೊದಲು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!