ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್

ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ...

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್
ಇಮ್ರಾನ್ ಖಾನ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: May 06, 2022 | 8:20 PM

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)  ಮತ್ತೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್ ರೆಕಾರ್ಡಿಂಗ್‌ನ ಕ್ಲಿಪ್‌ವೊಂದರಲ್ಲಿ ಇಮ್ರಾನ್ ಖಾನ್ ಅವರು ಯುನೈಟೆಡ್ ಕಿಂಗ್‌ಡಂನಲ್ಲಿ (United Kingdom) ತಮ್ಮ ಜೀವನವನ್ನು ವಿವರಿಸುತ್ತಾ ಹೇಳಿದ ಮಾತೊಂದು ಈ ವೈರಲ್ ಆಗಿದೆ. “ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂದು ಖಾನ್ ಹೇಳಿದ್ದಾರೆ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂಬ ವಾಕ್ಯವೇ ಈಗ ವೈರಲ್ ಆಗಿರುವುದು. ಇದು ಪಾಕಿಸ್ತಾನ ಮೂಲದ ಕಂಟೆಂಟ್ ಕ್ರಿಯೇಟರ್ ಜುನೈದ್ ಅಕ್ರಮ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಒಂದು ತುಣುಕು ಇದಾಗಿದೆ. ದುಬೈನಿಂದ ಪಾಕಿಸ್ತಾನಕ್ಕೆ ಬಂದಿದ್ದ ಅಕ್ರಮ್ ಗಂಜಿಸ್ವಾಗ್ ಎಂಬ ಹೆಸರಿನ ಇನ್​​ಸ್ಟಾಗ್ರಾಮ್​​  ಹ್ಯಾಂಡಲ್ ಅನ್ನು ಸಹ ನಡೆಸುತ್ತಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳಾದ ಮುಝಮ್ಮಿಲ್ ಹಸನ್ ಮತ್ತು ತಲ್ಹಾ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಪೂರ್ತಿ ವಿಡಿಯೊವನ್ನು ಖಾನ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಮತದ ಮೂಲಕ ಏಪ್ರಿಲ್ 10 ರಂದು ಖಾನ್ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ದೇಶದ ಸಂಸತ್ತಿನಿಂದ ಹೊರಹಾಕಲ್ಪಟ್ಟ ಮೊದಲ ಪಾಕಿಸ್ತಾನಿ ಪ್ರಧಾನ ಮಂತ್ರಿಯಾಗಿದ್ದಾರೆ ಖಾನ್.

ಕ್ರಿಕೆಟಿಗ, ರಾಜಕಾರಣಿ ಪಾಕಿಸ್ತಾನದಲ್ಲಿ ತನ್ನನ್ನು ಹೊರಹಾಕಲು ರಾಜಕೀಯ ವಿರೋಧಿಗಳು ಅಮೆರಿಕ ಜೊತೆ ಸೇರಿಕೊಂಡಿದ್ದಾರೆ ಎಂದು ಪದೇ ಪದೇ ಆರೋಪಿಸಿದ್ದಾರೆ. ಆದರೆ ಅವರು ಇದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಮತ್ತು ವಾಷಿಂಗ್ಟನ್ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಬಲವಾಗಿ ನಿರಾಕರಿಸಿದೆ. ಖಾನ್ ಅವರು ಬೇಗನೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.ಆದರೆ ದೇಶದ ಚುನಾವಣಾ ಆಯೋಗವು ಮೇ 2023 ರ ಮೊದಲು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ