AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್

ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ...

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್
ಇಮ್ರಾನ್ ಖಾನ್
TV9 Web
| Edited By: |

Updated on: May 06, 2022 | 8:20 PM

Share

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)  ಮತ್ತೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್ ರೆಕಾರ್ಡಿಂಗ್‌ನ ಕ್ಲಿಪ್‌ವೊಂದರಲ್ಲಿ ಇಮ್ರಾನ್ ಖಾನ್ ಅವರು ಯುನೈಟೆಡ್ ಕಿಂಗ್‌ಡಂನಲ್ಲಿ (United Kingdom) ತಮ್ಮ ಜೀವನವನ್ನು ವಿವರಿಸುತ್ತಾ ಹೇಳಿದ ಮಾತೊಂದು ಈ ವೈರಲ್ ಆಗಿದೆ. “ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂದು ಖಾನ್ ಹೇಳಿದ್ದಾರೆ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂಬ ವಾಕ್ಯವೇ ಈಗ ವೈರಲ್ ಆಗಿರುವುದು. ಇದು ಪಾಕಿಸ್ತಾನ ಮೂಲದ ಕಂಟೆಂಟ್ ಕ್ರಿಯೇಟರ್ ಜುನೈದ್ ಅಕ್ರಮ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಒಂದು ತುಣುಕು ಇದಾಗಿದೆ. ದುಬೈನಿಂದ ಪಾಕಿಸ್ತಾನಕ್ಕೆ ಬಂದಿದ್ದ ಅಕ್ರಮ್ ಗಂಜಿಸ್ವಾಗ್ ಎಂಬ ಹೆಸರಿನ ಇನ್​​ಸ್ಟಾಗ್ರಾಮ್​​  ಹ್ಯಾಂಡಲ್ ಅನ್ನು ಸಹ ನಡೆಸುತ್ತಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳಾದ ಮುಝಮ್ಮಿಲ್ ಹಸನ್ ಮತ್ತು ತಲ್ಹಾ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಪೂರ್ತಿ ವಿಡಿಯೊವನ್ನು ಖಾನ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಮತದ ಮೂಲಕ ಏಪ್ರಿಲ್ 10 ರಂದು ಖಾನ್ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ದೇಶದ ಸಂಸತ್ತಿನಿಂದ ಹೊರಹಾಕಲ್ಪಟ್ಟ ಮೊದಲ ಪಾಕಿಸ್ತಾನಿ ಪ್ರಧಾನ ಮಂತ್ರಿಯಾಗಿದ್ದಾರೆ ಖಾನ್.

ಕ್ರಿಕೆಟಿಗ, ರಾಜಕಾರಣಿ ಪಾಕಿಸ್ತಾನದಲ್ಲಿ ತನ್ನನ್ನು ಹೊರಹಾಕಲು ರಾಜಕೀಯ ವಿರೋಧಿಗಳು ಅಮೆರಿಕ ಜೊತೆ ಸೇರಿಕೊಂಡಿದ್ದಾರೆ ಎಂದು ಪದೇ ಪದೇ ಆರೋಪಿಸಿದ್ದಾರೆ. ಆದರೆ ಅವರು ಇದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಮತ್ತು ವಾಷಿಂಗ್ಟನ್ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಬಲವಾಗಿ ನಿರಾಕರಿಸಿದೆ. ಖಾನ್ ಅವರು ಬೇಗನೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.ಆದರೆ ದೇಶದ ಚುನಾವಣಾ ಆಯೋಗವು ಮೇ 2023 ರ ಮೊದಲು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?