AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್

ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ...

ಕತ್ತೆ ಮೇಲೆ ಗೆರೆ ಎಳೆದರೆ ಅದು ಝೀಬ್ರಾ ಆಗಲ್ಲ, ಕತ್ತೆ ಯಾವತ್ತೂ ಕತ್ತೆಯೇ: ಇಮ್ರಾನ್ ಖಾನ್ ಹೇಳಿಕೆ ವೈರಲ್
ಇಮ್ರಾನ್ ಖಾನ್
TV9 Web
| Edited By: |

Updated on: May 06, 2022 | 8:20 PM

Share

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)  ಮತ್ತೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್ ರೆಕಾರ್ಡಿಂಗ್‌ನ ಕ್ಲಿಪ್‌ವೊಂದರಲ್ಲಿ ಇಮ್ರಾನ್ ಖಾನ್ ಅವರು ಯುನೈಟೆಡ್ ಕಿಂಗ್‌ಡಂನಲ್ಲಿ (United Kingdom) ತಮ್ಮ ಜೀವನವನ್ನು ವಿವರಿಸುತ್ತಾ ಹೇಳಿದ ಮಾತೊಂದು ಈ ವೈರಲ್ ಆಗಿದೆ. “ನನಗೆ ಯುಕೆಯಲ್ಲಿ ತುಂಬಾ ಸ್ವಾಗತ ಸಿಕ್ಕಿತ್ತು, ಆದರೆ ನಾನು ಅದನ್ನು ನನ್ನ ಮನೆ ಎಂದು ಪರಿಗಣಿಸಲಿಲ್ಲ. ನಾನು ಯಾವಾಗಲೂ ಮೊದಲು ಪಾಕಿಸ್ತಾನಿ. ನೀವು ಕತ್ತೆಯ ಮೇಲೆ ಗೆರೆ ಎಳೆದರೆ ಝೀಬ್ರಾ ಆಗಿ ಬದಲಾಗುವುದಿಲ್ಲ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂದು ಖಾನ್ ಹೇಳಿದ್ದಾರೆ. ಕತ್ತೆ ಕತ್ತೆಯಾಗಿಯೇ ಉಳಿಯುತ್ತದೆ ಎಂಬ ವಾಕ್ಯವೇ ಈಗ ವೈರಲ್ ಆಗಿರುವುದು. ಇದು ಪಾಕಿಸ್ತಾನ ಮೂಲದ ಕಂಟೆಂಟ್ ಕ್ರಿಯೇಟರ್ ಜುನೈದ್ ಅಕ್ರಮ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಒಂದು ತುಣುಕು ಇದಾಗಿದೆ. ದುಬೈನಿಂದ ಪಾಕಿಸ್ತಾನಕ್ಕೆ ಬಂದಿದ್ದ ಅಕ್ರಮ್ ಗಂಜಿಸ್ವಾಗ್ ಎಂಬ ಹೆಸರಿನ ಇನ್​​ಸ್ಟಾಗ್ರಾಮ್​​  ಹ್ಯಾಂಡಲ್ ಅನ್ನು ಸಹ ನಡೆಸುತ್ತಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳಾದ ಮುಝಮ್ಮಿಲ್ ಹಸನ್ ಮತ್ತು ತಲ್ಹಾ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಪೂರ್ತಿ ವಿಡಿಯೊವನ್ನು ಖಾನ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಮತದ ಮೂಲಕ ಏಪ್ರಿಲ್ 10 ರಂದು ಖಾನ್ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ದೇಶದ ಸಂಸತ್ತಿನಿಂದ ಹೊರಹಾಕಲ್ಪಟ್ಟ ಮೊದಲ ಪಾಕಿಸ್ತಾನಿ ಪ್ರಧಾನ ಮಂತ್ರಿಯಾಗಿದ್ದಾರೆ ಖಾನ್.

ಕ್ರಿಕೆಟಿಗ, ರಾಜಕಾರಣಿ ಪಾಕಿಸ್ತಾನದಲ್ಲಿ ತನ್ನನ್ನು ಹೊರಹಾಕಲು ರಾಜಕೀಯ ವಿರೋಧಿಗಳು ಅಮೆರಿಕ ಜೊತೆ ಸೇರಿಕೊಂಡಿದ್ದಾರೆ ಎಂದು ಪದೇ ಪದೇ ಆರೋಪಿಸಿದ್ದಾರೆ. ಆದರೆ ಅವರು ಇದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಮತ್ತು ವಾಷಿಂಗ್ಟನ್ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಬಲವಾಗಿ ನಿರಾಕರಿಸಿದೆ. ಖಾನ್ ಅವರು ಬೇಗನೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.ಆದರೆ ದೇಶದ ಚುನಾವಣಾ ಆಯೋಗವು ಮೇ 2023 ರ ಮೊದಲು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್