AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ

ಈ ಹೇಯ ಕೃತ್ಯಕ್ಕೆ ಇಡೀ ಮನುಷ್ಯ ಕುಲವೇ ನಾಚಿಕೆಪಡಬೇಕು, ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ತನ್ನ 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ. ಇದೀಗ ಈ ಪೊಲೀಸರ ಮುಂದೆ ಬಂದು ತಪ್ಪೊಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಈ ಘಟನೆ ಎಲ್ಲಿ ನಡೆದಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 08, 2024 | 10:49 AM

Share

ಪಾಕಿಸ್ತಾನದಲ್ಲಿ ಹೃದಯ ವಿದ್ರಾವಕವಾದ ಘಟನೆಯೊಂದು ನಡೆದಿದೆ. ಮನುಷ್ಯ ಕುಲವೇ ನಾಚಿಕೆ ಪಡೆಬೇಕು ಈ ಹೇಯ ಕೃತ್ಯಕ್ಕೆ. ನೌಶಹ್ರೋ ಫಿರೋಜ್​​ ಎಂಬ ವ್ಯಕ್ತಿ ತನ್ನ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ ಎಂದು ಎಆರ್​​ವೈ ಸುದ್ದಿ ಸಂಸ್ಥೆ ಈ ಘಟನೆಯ ಬಗ್ಗೆ ವರದಿ ಮಾಡಿದೆ. ಈ ಬಗ್ಗೆ ಆ ವ್ಯಕ್ತಿಯೋ ಪೊಲೀಸರ ಮುಂದೆ ಬಂದು ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಫಿರೋಜ್​​ ನಾನೇ ನನ್ನ ಕೈಯಾರೆ ಮಗುವನ್ನು ಜೀವಂತ ಸಮಾಧಿ ಮಾಡಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ತನ್ನ 15 ದಿನ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಹಣವಿಲ್ಲ ಎಂದು, ಗೋಣಿ ಚೀಲದಲ್ಲಿ ಕಟ್ಟಿ ಹೂತಿಟ್ಟಿರುವುದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ಮಗುವನ್ನು ಹೆಣ್ಣು ಎಂದು ಗುರುತಿಸಲಾಗಿದ್ದು. ಪೊಲೀಸರು ನೌಶಹ್ರೋ ಫಿರೋಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯದ ಆದೇಶದ ಮೇರೆಗೆ ಮರಣೋತ್ತರ ಪರೀಕ್ಷೆಗಾಗಿ ಮಗುವನ್ನು ಸಮಾಧಿಯಿಂದ ಹೊರ ತೆಗೆದು ವಿಧಿವಿಜ್ಞಾನ ಕೇಂದ್ರಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಮಾರು ಒಂದು ದಶಕಗಳ ಹಿಂದೆ ಇಂತಹದೇ ಒಂದು ಘಟನೆ ಪಾಕಿಸ್ತಾನದ ಪಂಜಾಬ್​​ ಪ್ರಾಂತ್ಯದಲ್ಲಿ ನಡೆದಿತ್ತು. ಈ ಘಟನೆಯಲ್ಲಿ ತಂದೆಯೊಬ್ಬ ತನ್ನ ಎರಡು ದಿನದ ಮಗುವಿನ ಮುಖವನ್ನು ವಿರೂಪಗೊಳಿಸಿ ಜೀವಂತ ಸಮಾಧಿ ಮಾಡಿದ್ದಾನೆ. ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: 2025ಕ್ಕೆ ಯುದ್ಧ, 5079ರಲ್ಲಿ ಪ್ರಪಂಚ ಅಂತ್ಯ, ಭೂಮಿ ನಾಶ, ಆಘಾತಕಾರಿ ಭವಿಷ್ಯ ನುಡಿದ ಬಾಬಾ ವಂಗಾ

ಮನೆ ಕೆಲಸದಾಕೆಗೆ ದೈಹಿಕ ಹಿಂಸೆ ನೀಡಿದ ದಂಪತಿ

ಇದೊಂದು ಪ್ರತ್ಯೇಕ ಘಟನೆ ದಂಪತಿ ತನ್ನ ಮನೆಯ 13 ವರ್ಷದ ಕೆಲಸದಾಕೆಯನ್ನು ನಿಂದಿಸಿ, ವಿವಸ್ತ್ರಗೊಳಿಸಿ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಈ ಘಟನೆ ಲಾಹೋರ್​​ನ ಡಿಫೆನ್ಸ್​​ ಬಿ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಹಸ್ಸಾಂ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಸ್ಸಾಂ ಪತ್ನಿ ನಾಪತ್ತೆಯಾಗಿದ್ದು, ಆಕೆಗಾಗು ಹುಡುಕಾಟ ನಡೆಸಲಾಗಿದೆ.

ದೂರಿನ ಪ್ರಕಾರ, ಬಾಲಕಿಯ ತಾಯಿ ನನ್ನ ಮಗಳನ್ನು ಪದೇ ಪದೇ ದೈಹಿಕವಾಗಿ ಹಿಂಸೆ ನೀಡಲಾಗಿದೆ. ಕಳ್ಳತನ ಆರೋಪ ಮಾಡಿ ಅವಳನ್ನು ವಿವಸ್ತ್ರಗೊಳಿದ್ದಾರೆ. ಹಾಗೂ ನನ್ನ ಮಗಳ ಕೈ ಮತ್ತಿ ಕಾಲನ್ನು ಮುರಿದಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?