AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ

ಈ ಹೇಯ ಕೃತ್ಯಕ್ಕೆ ಇಡೀ ಮನುಷ್ಯ ಕುಲವೇ ನಾಚಿಕೆಪಡಬೇಕು, ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ತನ್ನ 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ. ಇದೀಗ ಈ ಪೊಲೀಸರ ಮುಂದೆ ಬಂದು ತಪ್ಪೊಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಈ ಘಟನೆ ಎಲ್ಲಿ ನಡೆದಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 08, 2024 | 10:49 AM

Share

ಪಾಕಿಸ್ತಾನದಲ್ಲಿ ಹೃದಯ ವಿದ್ರಾವಕವಾದ ಘಟನೆಯೊಂದು ನಡೆದಿದೆ. ಮನುಷ್ಯ ಕುಲವೇ ನಾಚಿಕೆ ಪಡೆಬೇಕು ಈ ಹೇಯ ಕೃತ್ಯಕ್ಕೆ. ನೌಶಹ್ರೋ ಫಿರೋಜ್​​ ಎಂಬ ವ್ಯಕ್ತಿ ತನ್ನ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ ಎಂದು ಎಆರ್​​ವೈ ಸುದ್ದಿ ಸಂಸ್ಥೆ ಈ ಘಟನೆಯ ಬಗ್ಗೆ ವರದಿ ಮಾಡಿದೆ. ಈ ಬಗ್ಗೆ ಆ ವ್ಯಕ್ತಿಯೋ ಪೊಲೀಸರ ಮುಂದೆ ಬಂದು ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಫಿರೋಜ್​​ ನಾನೇ ನನ್ನ ಕೈಯಾರೆ ಮಗುವನ್ನು ಜೀವಂತ ಸಮಾಧಿ ಮಾಡಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ತನ್ನ 15 ದಿನ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಹಣವಿಲ್ಲ ಎಂದು, ಗೋಣಿ ಚೀಲದಲ್ಲಿ ಕಟ್ಟಿ ಹೂತಿಟ್ಟಿರುವುದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ಮಗುವನ್ನು ಹೆಣ್ಣು ಎಂದು ಗುರುತಿಸಲಾಗಿದ್ದು. ಪೊಲೀಸರು ನೌಶಹ್ರೋ ಫಿರೋಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯದ ಆದೇಶದ ಮೇರೆಗೆ ಮರಣೋತ್ತರ ಪರೀಕ್ಷೆಗಾಗಿ ಮಗುವನ್ನು ಸಮಾಧಿಯಿಂದ ಹೊರ ತೆಗೆದು ವಿಧಿವಿಜ್ಞಾನ ಕೇಂದ್ರಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಮಾರು ಒಂದು ದಶಕಗಳ ಹಿಂದೆ ಇಂತಹದೇ ಒಂದು ಘಟನೆ ಪಾಕಿಸ್ತಾನದ ಪಂಜಾಬ್​​ ಪ್ರಾಂತ್ಯದಲ್ಲಿ ನಡೆದಿತ್ತು. ಈ ಘಟನೆಯಲ್ಲಿ ತಂದೆಯೊಬ್ಬ ತನ್ನ ಎರಡು ದಿನದ ಮಗುವಿನ ಮುಖವನ್ನು ವಿರೂಪಗೊಳಿಸಿ ಜೀವಂತ ಸಮಾಧಿ ಮಾಡಿದ್ದಾನೆ. ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: 2025ಕ್ಕೆ ಯುದ್ಧ, 5079ರಲ್ಲಿ ಪ್ರಪಂಚ ಅಂತ್ಯ, ಭೂಮಿ ನಾಶ, ಆಘಾತಕಾರಿ ಭವಿಷ್ಯ ನುಡಿದ ಬಾಬಾ ವಂಗಾ

ಮನೆ ಕೆಲಸದಾಕೆಗೆ ದೈಹಿಕ ಹಿಂಸೆ ನೀಡಿದ ದಂಪತಿ

ಇದೊಂದು ಪ್ರತ್ಯೇಕ ಘಟನೆ ದಂಪತಿ ತನ್ನ ಮನೆಯ 13 ವರ್ಷದ ಕೆಲಸದಾಕೆಯನ್ನು ನಿಂದಿಸಿ, ವಿವಸ್ತ್ರಗೊಳಿಸಿ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಈ ಘಟನೆ ಲಾಹೋರ್​​ನ ಡಿಫೆನ್ಸ್​​ ಬಿ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಹಸ್ಸಾಂ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಸ್ಸಾಂ ಪತ್ನಿ ನಾಪತ್ತೆಯಾಗಿದ್ದು, ಆಕೆಗಾಗು ಹುಡುಕಾಟ ನಡೆಸಲಾಗಿದೆ.

ದೂರಿನ ಪ್ರಕಾರ, ಬಾಲಕಿಯ ತಾಯಿ ನನ್ನ ಮಗಳನ್ನು ಪದೇ ಪದೇ ದೈಹಿಕವಾಗಿ ಹಿಂಸೆ ನೀಡಲಾಗಿದೆ. ಕಳ್ಳತನ ಆರೋಪ ಮಾಡಿ ಅವಳನ್ನು ವಿವಸ್ತ್ರಗೊಳಿದ್ದಾರೆ. ಹಾಗೂ ನನ್ನ ಮಗಳ ಕೈ ಮತ್ತಿ ಕಾಲನ್ನು ಮುರಿದಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ