AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ

ಈ ಹೇಯ ಕೃತ್ಯಕ್ಕೆ ಇಡೀ ಮನುಷ್ಯ ಕುಲವೇ ನಾಚಿಕೆಪಡಬೇಕು, ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ತನ್ನ 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ. ಇದೀಗ ಈ ಪೊಲೀಸರ ಮುಂದೆ ಬಂದು ತಪ್ಪೊಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಈ ಘಟನೆ ಎಲ್ಲಿ ನಡೆದಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತನ್ನ 15 ದಿನದ ಹೆಣ್ಣು ಮಗುವಿನ ಚಿಕಿತ್ಸೆಗೆ ಹಣವಿಲ್ಲ ಎಂದು ಜೀವಂತ ಸಮಾಧಿ ಮಾಡಿದ ತಂದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 08, 2024 | 10:49 AM

Share

ಪಾಕಿಸ್ತಾನದಲ್ಲಿ ಹೃದಯ ವಿದ್ರಾವಕವಾದ ಘಟನೆಯೊಂದು ನಡೆದಿದೆ. ಮನುಷ್ಯ ಕುಲವೇ ನಾಚಿಕೆ ಪಡೆಬೇಕು ಈ ಹೇಯ ಕೃತ್ಯಕ್ಕೆ. ನೌಶಹ್ರೋ ಫಿರೋಜ್​​ ಎಂಬ ವ್ಯಕ್ತಿ ತನ್ನ ಮಗುವನ್ನು ಜೀವಂತ ಸಮಾಧಿ ಮಾಡಿದ್ದಾನೆ ಎಂದು ಎಆರ್​​ವೈ ಸುದ್ದಿ ಸಂಸ್ಥೆ ಈ ಘಟನೆಯ ಬಗ್ಗೆ ವರದಿ ಮಾಡಿದೆ. ಈ ಬಗ್ಗೆ ಆ ವ್ಯಕ್ತಿಯೋ ಪೊಲೀಸರ ಮುಂದೆ ಬಂದು ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಫಿರೋಜ್​​ ನಾನೇ ನನ್ನ ಕೈಯಾರೆ ಮಗುವನ್ನು ಜೀವಂತ ಸಮಾಧಿ ಮಾಡಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ತನ್ನ 15 ದಿನ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಹಣವಿಲ್ಲ ಎಂದು, ಗೋಣಿ ಚೀಲದಲ್ಲಿ ಕಟ್ಟಿ ಹೂತಿಟ್ಟಿರುವುದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ಮಗುವನ್ನು ಹೆಣ್ಣು ಎಂದು ಗುರುತಿಸಲಾಗಿದ್ದು. ಪೊಲೀಸರು ನೌಶಹ್ರೋ ಫಿರೋಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯದ ಆದೇಶದ ಮೇರೆಗೆ ಮರಣೋತ್ತರ ಪರೀಕ್ಷೆಗಾಗಿ ಮಗುವನ್ನು ಸಮಾಧಿಯಿಂದ ಹೊರ ತೆಗೆದು ವಿಧಿವಿಜ್ಞಾನ ಕೇಂದ್ರಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಮಾರು ಒಂದು ದಶಕಗಳ ಹಿಂದೆ ಇಂತಹದೇ ಒಂದು ಘಟನೆ ಪಾಕಿಸ್ತಾನದ ಪಂಜಾಬ್​​ ಪ್ರಾಂತ್ಯದಲ್ಲಿ ನಡೆದಿತ್ತು. ಈ ಘಟನೆಯಲ್ಲಿ ತಂದೆಯೊಬ್ಬ ತನ್ನ ಎರಡು ದಿನದ ಮಗುವಿನ ಮುಖವನ್ನು ವಿರೂಪಗೊಳಿಸಿ ಜೀವಂತ ಸಮಾಧಿ ಮಾಡಿದ್ದಾನೆ. ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: 2025ಕ್ಕೆ ಯುದ್ಧ, 5079ರಲ್ಲಿ ಪ್ರಪಂಚ ಅಂತ್ಯ, ಭೂಮಿ ನಾಶ, ಆಘಾತಕಾರಿ ಭವಿಷ್ಯ ನುಡಿದ ಬಾಬಾ ವಂಗಾ

ಮನೆ ಕೆಲಸದಾಕೆಗೆ ದೈಹಿಕ ಹಿಂಸೆ ನೀಡಿದ ದಂಪತಿ

ಇದೊಂದು ಪ್ರತ್ಯೇಕ ಘಟನೆ ದಂಪತಿ ತನ್ನ ಮನೆಯ 13 ವರ್ಷದ ಕೆಲಸದಾಕೆಯನ್ನು ನಿಂದಿಸಿ, ವಿವಸ್ತ್ರಗೊಳಿಸಿ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಈ ಘಟನೆ ಲಾಹೋರ್​​ನ ಡಿಫೆನ್ಸ್​​ ಬಿ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಹಸ್ಸಾಂ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಸ್ಸಾಂ ಪತ್ನಿ ನಾಪತ್ತೆಯಾಗಿದ್ದು, ಆಕೆಗಾಗು ಹುಡುಕಾಟ ನಡೆಸಲಾಗಿದೆ.

ದೂರಿನ ಪ್ರಕಾರ, ಬಾಲಕಿಯ ತಾಯಿ ನನ್ನ ಮಗಳನ್ನು ಪದೇ ಪದೇ ದೈಹಿಕವಾಗಿ ಹಿಂಸೆ ನೀಡಲಾಗಿದೆ. ಕಳ್ಳತನ ಆರೋಪ ಮಾಡಿ ಅವಳನ್ನು ವಿವಸ್ತ್ರಗೊಳಿದ್ದಾರೆ. ಹಾಗೂ ನನ್ನ ಮಗಳ ಕೈ ಮತ್ತಿ ಕಾಲನ್ನು ಮುರಿದಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ