AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ; ಸಾವಿರಾರು ಆರೋಪಿಗಳ ಪಟ್ಟಿಯಲ್ಲಿದೆ ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥನ ಹೆಸರು !

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ತರ್​ ಅಬ್ದುರ್​ ಖಾನ್ ಮೂವರು ​ ಮಕ್ಕಳ ಹೆಸರಲ್ಲಿ ಖಾತೆಯಿದ್ದು, ಅದರಲ್ಲಿ ಹಣ 3.7 ಮಿಲಿಯನ್ ಡಾಲರ್​​ಗೆ ಏರಿಕೆಯಾಗಿದೆ ಎಂದು ಸ್ವಿಸ್​ ಬ್ಯಾಂಕ್​​ನಿಂದ ಲೀಕ್​ ಆದ ಡಾಟಾದಲ್ಲಿ ಗೊತ್ತಾಗಿದೆ

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ; ಸಾವಿರಾರು ಆರೋಪಿಗಳ ಪಟ್ಟಿಯಲ್ಲಿದೆ ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥನ ಹೆಸರು !
ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥ
TV9 Web
| Edited By: |

Updated on:Feb 22, 2022 | 2:57 PM

Share

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ ಕೂಡಿಟ್ಟ ಸಾವಿರಾರು ಜನರಲ್ಲಿ ಪಾಕಿಸ್ತಾನಿ ಬೇಹುಗಾರಿಕಾ ಸಂಸ್ಥೆ ಐಎಸ್​ಐನ (ISI) ಮಾಜಿ ಮುಖ್ಯಸ್ಥನ ಹೆಸರೂ ಇದೆ. ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಜಿಯಾ-ಉಲ್-ಹಕ್​​ನ (Zia-ul-Haq) ಆಪ್ತರಲ್ಲಿ ಒಬ್ಬರಾಗಿದ್ದ ಜನರಲ್​ ಅಕ್ತರ್​ ಅಬ್ದುಲ್​ ರೆಹಮಾನ್ ಖಾನ್​ ಹೆಸರು ಆರೋಪಿಗಳ ಪಟ್ಟಿಯಲ್ಲಿ ಇದೆ ಎಂದು ನ್ಯೂಯಾರ್ಕ್ ಟೈಮ್ಸ್​ ವರದಿ ಮಾಡಿದೆ. ಅಂದಹಾಗೇ ಜಿಯಾ ಉಲ್​ ಹಕ್​ ಮತ್ತು ಅಕ್ತರ್​ ಅಬ್ದುರ್​ ರೆಹಮಾನ್​ ಖಾನ್​ ಇಬ್ಬರೂ ಸಹ 1988ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದು, ಇವರ ಸಾವಿನ ಬಗ್ಗೆ ಇನ್ನೂ ನಿಗೂಢತೆ ಇದೆ. ಅಫ್ಘಾನಿಸ್ತಾನದಲ್ಲಿರುವ ರಷ್ಯನ್ನರ ವಿರುದ್ಧ ಹೋರಾಡುತ್ತಿದ್ದ ಮುಜಾಹಿದ್ದೀನ್​​ಗಳಿಗೆ (ಇಸ್ಲಾಂಮಿಕ್​ ಗೆರಿಲ್ಲಾಗಳು) ಯುಎಸ್​ ಮತ್ತು ಅದರ ಮಿತ್ರ ರಾಷ್ಟ್ರಗಳಿಂದ ಬಿಲಿಯನ್​ಗಳಷ್ಟು ಡಾಲರ್​ ಹಣ ಹರಿಯಲು ಅಕ್ತರ್​ ಸಹಾಯ ಮಾಡುತ್ತಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.  ಅಂದರೆ ಈ ದೇಶಗಳು ಪಾಕಿಸ್ತಾನಕ್ಕೆ ಆರ್ಥಿಕ ಸಹಾಯಾರ್ಥವಾಗಿ ನೀಡುತ್ತಿದ್ದ ಹಣವನ್ನು ಮುಜಾಹಿದ್ದೀನ್​ಗಳಿಗೆ ತಲುಪುವಂತೆ ಮಾಡುತ್ತಿದ್ದರು.

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ತರ್​ ಅಬ್ದುರ್​ ಖಾನ್ ಮೂವರು ​ ಮಕ್ಕಳ ಹೆಸರಲ್ಲಿ ಖಾತೆಯಿದ್ದು, ಅದರಲ್ಲಿ ಹಣ 3.7 ಮಿಲಿಯನ್ ಡಾಲರ್​​ಗೆ ಏರಿಕೆಯಾಗಿದೆ ಎಂದು ಸ್ವಿಸ್​ ಬ್ಯಾಂಕ್​​ನಿಂದ ಲೀಕ್​ ಆದ ಡಾಟಾದಲ್ಲಿ ಗೊತ್ತಾಗಿದೆ ಎಂದು ನ್ಯೂಯಾರ್ಕ್​ ಟೈಮ್ಸ್​ ವರದಿಯಲ್ಲಿ ಉಲ್ಲೇಖಿಸಿದೆ. ಹಾಗೇ, ಸ್ವಿಸ್​ ಬ್ಯಾಂಕ್​​ನಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಅಕ್ರಮ ಆಸ್ತಿ ಮಾಡಿದ್ದಾಗ್ಯೂ ಕೂಡ ಅಕ್ತರ್​ ಎಂದಿಗೂ ಸಿಕ್ಕಿಬೀಳಲಿಲ್ಲ. ಇವರಷ್ಟೇ ಅಲ್ಲ, ಜೋರ್ಡನ್​ ದೇಶದ ಕಿಂಗ್​ ಅಬ್ದುಲ್ಲಾ II, ಈಜಿಪ್ಟ್​ ಮಾಜಿ ಅಧ್ಯಕ್ಷ ಹೋಸ್ನಿ ಮುಬಾರಕ್​ ಪುತ್ರ ಸೇರಿ ಹಲವ ಹೆಸರು ಈ ಲಿಸ್ಟ್​​ನಲ್ಲಿದೆ. ಸ್ವಿಜರ್​ಲ್ಯಾಂಡ್​​ನ ಎರಡನೇ ದೊಡ್ಡ ಸಾಲದಾತ ಸಂಸ್ಥೆಯಾದ ಕ್ರೆಡಿಟ್​ ಸ್ಯೂಸ್​ ಸೆಯಿಂದ ಸೋರಿಕೆಯಾದ ಮಾಹಿತಿಯಲ್ಲಿ ಬಹಿರಂಗವಾಗಿದೆ.

ಸ್ಯೂಸ್ ಸೀಕ್ರೆಟ್ಸ್ ಎಂದು ಕರೆಯಲ್ಪಡುವ ಈ ಸ್ಫೋಟಕ ವಿಚಾರವನ್ನು  ಅನಾಮಧೇಯ ಮೂಲವೊಂದು ಜರ್ಮನ್ ಪತ್ರಿಕೆಯಾದ Suddeutsche Zeitung ಗೆ  ನೀಡಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರಿಗಳ ಸಂಪತ್ತುಗಳನ್ನು ಬಯಲಿಗೆಳೆಯಲು ಈ ಮಾಹಿತಿ ಕೊಡುತ್ತಿರುವುದಾಗಿ  ಮಾಹಿತಿ ನೀಡಿದ ಅನಾಮಧೇಯ ವ್ಯಕ್ತಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 6 ಮಂದಿ ದುರ್ಮರಣ, 12ಕ್ಕೂ ಹೆಚ್ಚು ಜನರಿಗೆ ಗಾಯ

Published On - 1:27 pm, Tue, 22 February 22

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ