AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ; ಸಾವಿರಾರು ಆರೋಪಿಗಳ ಪಟ್ಟಿಯಲ್ಲಿದೆ ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥನ ಹೆಸರು !

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ತರ್​ ಅಬ್ದುರ್​ ಖಾನ್ ಮೂವರು ​ ಮಕ್ಕಳ ಹೆಸರಲ್ಲಿ ಖಾತೆಯಿದ್ದು, ಅದರಲ್ಲಿ ಹಣ 3.7 ಮಿಲಿಯನ್ ಡಾಲರ್​​ಗೆ ಏರಿಕೆಯಾಗಿದೆ ಎಂದು ಸ್ವಿಸ್​ ಬ್ಯಾಂಕ್​​ನಿಂದ ಲೀಕ್​ ಆದ ಡಾಟಾದಲ್ಲಿ ಗೊತ್ತಾಗಿದೆ

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ; ಸಾವಿರಾರು ಆರೋಪಿಗಳ ಪಟ್ಟಿಯಲ್ಲಿದೆ ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥನ ಹೆಸರು !
ಪಾಕಿಸ್ತಾನ ಐಎಸ್​ಐ ಮಾಜಿ ಮುಖ್ಯಸ್ಥ
Follow us
TV9 Web
| Updated By: Lakshmi Hegde

Updated on:Feb 22, 2022 | 2:57 PM

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ರಮ ಆಸ್ತಿ ಕೂಡಿಟ್ಟ ಸಾವಿರಾರು ಜನರಲ್ಲಿ ಪಾಕಿಸ್ತಾನಿ ಬೇಹುಗಾರಿಕಾ ಸಂಸ್ಥೆ ಐಎಸ್​ಐನ (ISI) ಮಾಜಿ ಮುಖ್ಯಸ್ಥನ ಹೆಸರೂ ಇದೆ. ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಜಿಯಾ-ಉಲ್-ಹಕ್​​ನ (Zia-ul-Haq) ಆಪ್ತರಲ್ಲಿ ಒಬ್ಬರಾಗಿದ್ದ ಜನರಲ್​ ಅಕ್ತರ್​ ಅಬ್ದುಲ್​ ರೆಹಮಾನ್ ಖಾನ್​ ಹೆಸರು ಆರೋಪಿಗಳ ಪಟ್ಟಿಯಲ್ಲಿ ಇದೆ ಎಂದು ನ್ಯೂಯಾರ್ಕ್ ಟೈಮ್ಸ್​ ವರದಿ ಮಾಡಿದೆ. ಅಂದಹಾಗೇ ಜಿಯಾ ಉಲ್​ ಹಕ್​ ಮತ್ತು ಅಕ್ತರ್​ ಅಬ್ದುರ್​ ರೆಹಮಾನ್​ ಖಾನ್​ ಇಬ್ಬರೂ ಸಹ 1988ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದು, ಇವರ ಸಾವಿನ ಬಗ್ಗೆ ಇನ್ನೂ ನಿಗೂಢತೆ ಇದೆ. ಅಫ್ಘಾನಿಸ್ತಾನದಲ್ಲಿರುವ ರಷ್ಯನ್ನರ ವಿರುದ್ಧ ಹೋರಾಡುತ್ತಿದ್ದ ಮುಜಾಹಿದ್ದೀನ್​​ಗಳಿಗೆ (ಇಸ್ಲಾಂಮಿಕ್​ ಗೆರಿಲ್ಲಾಗಳು) ಯುಎಸ್​ ಮತ್ತು ಅದರ ಮಿತ್ರ ರಾಷ್ಟ್ರಗಳಿಂದ ಬಿಲಿಯನ್​ಗಳಷ್ಟು ಡಾಲರ್​ ಹಣ ಹರಿಯಲು ಅಕ್ತರ್​ ಸಹಾಯ ಮಾಡುತ್ತಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.  ಅಂದರೆ ಈ ದೇಶಗಳು ಪಾಕಿಸ್ತಾನಕ್ಕೆ ಆರ್ಥಿಕ ಸಹಾಯಾರ್ಥವಾಗಿ ನೀಡುತ್ತಿದ್ದ ಹಣವನ್ನು ಮುಜಾಹಿದ್ದೀನ್​ಗಳಿಗೆ ತಲುಪುವಂತೆ ಮಾಡುತ್ತಿದ್ದರು.

ಸ್ವಿಸ್​ ಬ್ಯಾಂಕ್​​ನಲ್ಲಿ ಅಕ್ತರ್​ ಅಬ್ದುರ್​ ಖಾನ್ ಮೂವರು ​ ಮಕ್ಕಳ ಹೆಸರಲ್ಲಿ ಖಾತೆಯಿದ್ದು, ಅದರಲ್ಲಿ ಹಣ 3.7 ಮಿಲಿಯನ್ ಡಾಲರ್​​ಗೆ ಏರಿಕೆಯಾಗಿದೆ ಎಂದು ಸ್ವಿಸ್​ ಬ್ಯಾಂಕ್​​ನಿಂದ ಲೀಕ್​ ಆದ ಡಾಟಾದಲ್ಲಿ ಗೊತ್ತಾಗಿದೆ ಎಂದು ನ್ಯೂಯಾರ್ಕ್​ ಟೈಮ್ಸ್​ ವರದಿಯಲ್ಲಿ ಉಲ್ಲೇಖಿಸಿದೆ. ಹಾಗೇ, ಸ್ವಿಸ್​ ಬ್ಯಾಂಕ್​​ನಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಅಕ್ರಮ ಆಸ್ತಿ ಮಾಡಿದ್ದಾಗ್ಯೂ ಕೂಡ ಅಕ್ತರ್​ ಎಂದಿಗೂ ಸಿಕ್ಕಿಬೀಳಲಿಲ್ಲ. ಇವರಷ್ಟೇ ಅಲ್ಲ, ಜೋರ್ಡನ್​ ದೇಶದ ಕಿಂಗ್​ ಅಬ್ದುಲ್ಲಾ II, ಈಜಿಪ್ಟ್​ ಮಾಜಿ ಅಧ್ಯಕ್ಷ ಹೋಸ್ನಿ ಮುಬಾರಕ್​ ಪುತ್ರ ಸೇರಿ ಹಲವ ಹೆಸರು ಈ ಲಿಸ್ಟ್​​ನಲ್ಲಿದೆ. ಸ್ವಿಜರ್​ಲ್ಯಾಂಡ್​​ನ ಎರಡನೇ ದೊಡ್ಡ ಸಾಲದಾತ ಸಂಸ್ಥೆಯಾದ ಕ್ರೆಡಿಟ್​ ಸ್ಯೂಸ್​ ಸೆಯಿಂದ ಸೋರಿಕೆಯಾದ ಮಾಹಿತಿಯಲ್ಲಿ ಬಹಿರಂಗವಾಗಿದೆ.

ಸ್ಯೂಸ್ ಸೀಕ್ರೆಟ್ಸ್ ಎಂದು ಕರೆಯಲ್ಪಡುವ ಈ ಸ್ಫೋಟಕ ವಿಚಾರವನ್ನು  ಅನಾಮಧೇಯ ಮೂಲವೊಂದು ಜರ್ಮನ್ ಪತ್ರಿಕೆಯಾದ Suddeutsche Zeitung ಗೆ  ನೀಡಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರಿಗಳ ಸಂಪತ್ತುಗಳನ್ನು ಬಯಲಿಗೆಳೆಯಲು ಈ ಮಾಹಿತಿ ಕೊಡುತ್ತಿರುವುದಾಗಿ  ಮಾಹಿತಿ ನೀಡಿದ ಅನಾಮಧೇಯ ವ್ಯಕ್ತಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 6 ಮಂದಿ ದುರ್ಮರಣ, 12ಕ್ಕೂ ಹೆಚ್ಚು ಜನರಿಗೆ ಗಾಯ

Published On - 1:27 pm, Tue, 22 February 22

ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ