AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನದ ಅವಳಿ ಶಿಶುಗಳ ಜನನ ಪ್ರಮಾಣಪತ್ರ ಮಾಡಿಸಲು ಹೋದಾಗ ಬಾಂಬ್​ ಸ್ಫೋಟ, ಮಕ್ಕಳು ಸಾವು

ಅವಳಿ ಶಿಶುಗಳ ಜನನ ಪ್ರಮಾಣಪತ್ರ ಮಾಡಿಸುತ್ತಿದ್ದಾಗ ಬಾಂಬ್​ ಸ್ಫೋಟಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗಾಜಾದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜನನವನ್ನು ನೋಂದಾಯಿಸಲು ಅವರು ಸರ್ಕಾರಿ ಕಚೇರಿಗೆ ತೆರಳಿದ್ದರು, ಅಲ್ಲಿ ಇಸ್ರೇಲ್​ ವೈಮಾನಿಕ ದಾಳಿ ನಡೆಸಿದ್ದು, ಮೊಹಮ್ಮದ್ ಅಬು ಅಲ್ ಕುಮ್ಸನ್​ ಅವರ ಎರಡು ಶಿಶುಗಳು, ಪತ್ನಿ, ಅತ್ತೆ, ಮಗ ಅಸ್ರ್​ ಮಗಳು ಐಸಲ್ ಕೂಡ ಮೃತಪಟ್ಟಿದ್ದಾರೆ.

4 ದಿನದ ಅವಳಿ ಶಿಶುಗಳ ಜನನ ಪ್ರಮಾಣಪತ್ರ ಮಾಡಿಸಲು ಹೋದಾಗ ಬಾಂಬ್​ ಸ್ಫೋಟ, ಮಕ್ಕಳು ಸಾವು
ಶಿಶುಗಳ ಸಾವುImage Credit source: Thelallanntop.com
ನಯನಾ ರಾಜೀವ್
|

Updated on:Aug 14, 2024 | 10:20 AM

Share

ನಾಲ್ಕು ದಿನದ ಅವಳಿ ಶಿಶುಗಳ ಜನನ ಪ್ರಮಾಣಪತ್ರ ಮಾಡಿಸುತ್ತಿದ್ದಾಗ ಬಾಂಬ್​ ಸ್ಫೋಟಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗಾಜಾದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜನನವನ್ನು ನೋಂದಾಯಿಸಲು ಅವರು ಸರ್ಕಾರಿ ಕಚೇರಿಗೆ ತೆರಳಿದ್ದರು, ಅಲ್ಲಿ ಇಸ್ರೇಲ್​ ವೈಮಾನಿಕ ದಾಳಿ ನಡೆಸಿದ್ದು, ಮೊಹಮ್ಮದ್ ಅಬು ಅಲ್ ಕುಮ್ಸನ್​ ಅವರ ಎರಡು ಶಿಶುಗಳು, ಪತ್ನಿ, ಅತ್ತೆ, ಮಗ ಅಸ್ರ್​ ಮಗಳು ಐಸಲ್ ಕೂಡ ಮೃತಪಟ್ಟಿದ್ದಾರೆ.

ಕುಮ್ಸನ್ ಸರ್ಕಾರಿ ಕಚೇರಿಯಲ್ಲಿದ್ದಾಗ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಬಾಲಾಹ್​ನಲ್ಲಿರುವ ನಿಮ್ಮ ಮನೆಯ ಮೇಲೆ ಬಾಂಬ್​ ದಾಳಿ ನಡೆದಿದೆ ಎನ್ನುವ ವಿಚಾರ ಕೇಳಿದಾಗ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ 115 ನವಜಾತ ಶಿಶುಗಳು ಸಾವನ್ನಪ್ಪಿವೆ. ಕುಮ್ಸನ್ ಮನೆಯ ಮೇಲೆ ಶೆಲ್ ಬಿದ್ದಿದೆ. ಯುದ್ಧದ ಆರಂಭಿಕ ವಾರಗಳಲ್ಲಿ, ಕುಮ್ಸನ್ ಹಿಂದೆ ವಾಸಿಸುತ್ತಿದ್ದ ಸ್ಥಳವನ್ನು ಬಿಟ್ಟು ಬೇರೆಡೆಗೆ ಬಂಂದಿದ್ದರು. ಇಸ್ರೇಲಿ ಸೇನೆಯ ಸೂಚನೆ ಮೇರೆಗೆ ಗಾಜಾ ಪಟ್ಟಿಯ ಕೇಂದ್ರ ಭಾಗದಲ್ಲಿ ಆಶ್ರಯ ಪಡೆದರು.

ಮತ್ತಷ್ಟು ಓದಿ: ಹಮಾಸ್‌ನ ರಾಕೆಟ್ ದಾಳಿ ವಿಫಲವಾದ ಬಳಿಕ ಇಸ್ರೇಲಿ ಮಿಲಿಟರಿ ಸೈಟ್‌ಗಳ ಮೇಲೆ ವೈಮಾನಿಕ ದಾಳಿ ಮಾಡಿದ ಇರಾನ್

ಗಾಜಾ ನಗರದಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ಟೀನಿಯಾದವರಿಗೆ ಆಶ್ರಯ ನೀಡುವ ಶಾಲೆಯ ಮೇಲೆ ದಾಳಿ ನಡೆಸಲಾಯಿತು. ಈ ಇಸ್ರೇಲ್ ವೈಮಾನಿಕ ದಾಳಿಯಲ್ಲಿ 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಈ ಶಾಲೆಯು ಹಮಾಸ್‌ನ ಸಕ್ರಿಯ ಸೇನಾ ಕೇಂದ್ರವಾಗಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಆದರೆ, ಹಮಾಸ್ ಇದನ್ನು ನಿರಾಕರಿಸಿದೆ.

ಅಕ್ಟೋಬರ್ 7, 2023 ರಂದು, ಹಮಾಸ್ ದಕ್ಷಿಣ ಇಸ್ರೇಲ್ ಮೇಲೆ ದಾಳಿ ಮಾಡಿತು. ಮತ್ತು ಸರಿಸುಮಾರು 1,200 ಜನರನ್ನು ಕೊಂದರು. ಅವರಲ್ಲಿ ಹೆಚ್ಚಿನವರು ನಾಗರಿಕರು ಮತ್ತು ಸುಮಾರು 250 ಜನರನ್ನು ಅಪಹರಿಸಲಾಯಿತು. ಇದು ಯುದ್ಧದ ಆರಂಭವಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:19 am, Wed, 14 August 24

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!