AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

ಇಂದಿನ ಬಾಲಕಿಯರೇ ಮುಂದಿನ ತಾಯಂದಿರು. ಈಗ ಬಾಲಕಿಯರಿಗೆ ಶಿಕ್ಷಣ ಪಡೆಯಲು ಅವಕಾಶ ಕೊಡದೆ ಇದ್ದರೆ, ಮುಂದೆ ಅವರ ಮಕ್ಕಳಿಗೆ ಒಳ್ಳೆಯ ನಡವಳಿಕೆ ಕಲಿಸುವುದಾದರೂ ಹೇಗೆ? ಎಂದು ಬಾಲಕಿ ಪ್ರಶ್ನಿಸಿದ್ದಾಳೆ.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ
ತಾಲಿಬಾನಿಗಳನ್ನು ವಿರೋಧಿಸಿ, ಶಿಕ್ಷಣದ ಹಕ್ಕನ್ನು ಪ್ರತಿಪಾದಿಸಿದ ಬಾಲಕಿ
TV9 Web
| Edited By: |

Updated on:Sep 24, 2021 | 4:40 PM

Share

ಅಫ್ಘಾನಿಸ್ತಾನವನ್ನು ತಾಲಿಬಾನ್ (Taliban Government)​ ವಶಪಡಿಸಿಕೊಂಡ ಬಳಿಕ ಅಲ್ಲಿನ ಅನೇಕ ವ್ಯವಸ್ಥೆಗಳು ಬದಲಾಗಿವೆ. ಈಗಂತೂ ತಾಲಿಬಾನ್ ಸರ್ಕಾರ ಆಡಳಿತಕ್ಕೆ ಬಂದಿದೆ. ತಾಲಿಬಾನಿಗಳೆಂದರೆ ಮೊದಲಿನಿಂದಲೂ ಮಹಿಳಾ ಹಕ್ಕುಗಳ ವಿರೋಧಿಗಳು ಎಂಬ ಮಾತಿದೆ. ಸದ್ಯ ತಾಲಿಬಾನಿಗಳು ಶಾಲಾ-ಕಾಲೇಜು, ಮದರಸಾಗಳ ಪ್ರಾರಂಭಕ್ಕೆ ಅನುಮತಿ ನೀಡಿದ್ದರೂ, ಇನ್ನೂ ಹೆಣ್ಣುಮಕ್ಕಳ ಪಾಲಿಗೆ ಶಿಕ್ಷಣ (Girls Education) ಸವಾಲಾಗಿದೆ. ಎಲ್ಲ ಶಿಕ್ಷಕರು ಮತ್ತು ಗಂಡುಮಕ್ಕಳು ಶಾಲೆಗಳಿಗೆ ಹಾಜರಾಗಬಹುದು ಎಂದು ತಾಲಿಬಾನ್​ ಸರ್ಕಾರ ಹೇಳಿದೆ.  ಆದರೆ ಇದು ಸರಿಯಲ್ಲ, ಹೆಣ್ಣುಮಕ್ಕಳ ಶಿಕ್ಷಣಕ್ಕೂ ಅವಕಾಶ ಕೊಡಬೇಕು ಎಂಬ ಆಗ್ರಹ ಅಫ್ಘಾನಿಸ್ತಾನದಲ್ಲೇ ಹೆಚ್ಚುತ್ತಿದೆ. ಹಾಗೇ, ಈಗೊಬ್ಬಳು ಅಫ್ಘಾನಿಸ್ತಾನದ ಬಾಲಕಿ ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಧೈರ್ಯವಾಗಿ ಮಾತನಾಡಿ, ತಾಲಿಬಾನಿಗಳನ್ನು ವಿರೋಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  

ಅಫ್ಘಾನಿಸ್ತಾನದ ಪತ್ರಕರ್ತ ಬಿಲಾಲ್​ ಸರ್ವರಿ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಬಾಲಕಿಯ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ. ‘ಈ ದೇಶದ ಅಭಿವೃದ್ಧಿಗಾಗಿ ನಾವೂ ಏನನ್ನಾದರೂ ಮಾಡಬೇಕು. ಅಲ್ಲಾ ನಮಗೆ ಆ ಅವಕಾಶ ಕೊಟ್ಟಿದ್ದಾನೆ. ಮಹಿಳೆಯರಿಗೂ ಪುರುಷರಷ್ಟೇ ಸಮಾನವಾದ ಹಕ್ಕು ಇದೆ. ಈ ಅವಕಾಶ, ಹಕ್ಕನ್ನು ಕಸಿದುಕೊಳ್ಳಲು ತಾಲಿಬಾನಿಗಳು ಯಾರು?’ ಎಂದು ಬಾಲಕಿ ಪ್ರಶ್ನಿಸಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಅಷ್ಟೇ ಅಲ್ಲ, ‘ಇಂದಿನ ಬಾಲಕಿಯರೇ ಮುಂದಿನ ತಾಯಂದಿರು. ಈಗ ಬಾಲಕಿಯರಿಗೆ ಶಿಕ್ಷಣ ಪಡೆಯಲು ಅವಕಾಶ ಕೊಡದೆ ಇದ್ದರೆ, ಮುಂದೆ ಅವರ ಮಕ್ಕಳಿಗೆ ಒಳ್ಳೆಯ ನಡವಳಿಕೆ ಕಲಿಸುವುದಾದರೂ ಹೇಗೆ? ನಾನು ಹೊಸ ಪೀಳಿಗೆಯ ಹುಡುಗಿ. ನಾನು ಕೇವಲ, ತಿನ್ನಲು, ನಿದ್ದೆ ಮಾಡಲು, ಮನೆಯಲ್ಲೇ ಇರಲು ಹುಟ್ಟಿಲ್ಲ. ನನಗೆ ಶಾಲೆಗೆ ಹೋಗಬೇಕು. ಈ ದೇಶದ ಅಭಿವೃದ್ಧಿಗಾಗಿ ನಾನೇದಾರೂ ಮಾಡಬೇಕು’ ಎಂದು ಬಾಲಕಿ ಹೇಳಿದ್ದಾಳೆ.

ಮುಂದುವರಿದು ಮಾತನಾಡಿದ ಬಾಲಕಿ, ‘ಶಿಕ್ಷಣವೇ ಇಲ್ಲದೆ ಈ ದೇಶ ಅಭಿವೃದ್ಧಿಯಾಗುವುದಾದರೂ ಹೇಗೆ? ಅಫ್ಘಾನ್​​ನಲ್ಲಿ ಹೆಣ್ಣು ಮಕ್ಕಳು ಶಿಕ್ಷಣವನ್ನೇ ಪಡೆಯದಿದ್ದರೆ ನಮ್ಮ ಮುಂದಿನ ಸಂತತಿ ಸುಶಿಕ್ಷಿತರಾಗುವುದು ಹೇಗೆ? ಶಿಕ್ಷಣವಂತರಾಗದೆ ನಮಗೆ ಈ ಜಗತ್ತಿನಲ್ಲಿ ಗೌರವ ಸಿಗುವುದಿಲ್ಲ’ಎಂದು ಹೇಳಿದ್ದಾಳೆ.  ಈ ವಿಡಿಯೋ ಟ್ವಿಟರ್​ನಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ತಾಲಿಬಾನಿಗಳ ವಿರುದ್ಧವಾಗಿ, ತನ್ನ ಹಕ್ಕುಗಳನ್ನು ಪಡೆಯಲು ಬಾಲಕಿ ದಿಟ್ಟವಾಗಿ ಮಾತನಾಡಿದ್ದನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ತ್ಯಾಜ್ಯ ಸಂಗ್ರಹದಿಂದ ನದಿ ನೀರು ಕಲುಷಿತ; ಪಾಲಿಕೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

ಹಾಸನ: ದೊಡ್ಡಗದ್ದವಳ್ಳಿಯ ಮಹಾಕಾಳಿ ದೇಗುಲಕ್ಕೆ 1 ವರ್ಷದಿಂದ ಬೀಗ; ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಜನರ ಅಸಮಾಧಾನ

Published On - 4:37 pm, Fri, 24 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ