AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ
ರಷ್ಯಾ ಕಾರ್ಖಾನೆ ಸ್ಫೋಟ
TV9 Web
| Edited By: |

Updated on: Oct 22, 2021 | 3:57 PM

Share

ರಷ್ಯಾದ ಪಶ್ಚಿಮ ರಿಯಾಜಾನ್​ ಪ್ರಾಂತ್ಯದಲ್ಲಿರುವ ಒಂದು ಗನ್​ಪೌಡರ್​ (ರಾಕೆಟ್​, ಗನ್​, ಗ್ರೆನೇಡ್​ ಇತ್ಯಾದಿ ಸಾಧನಗಳಲ್ಲಿ ಬಳಸುವ ರಾಸಾಯನಿಕ ಸ್ಫೋಟಕ ಪುಡಿ) ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಟಿಎಎಸ್​ಎಸ್​ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಕೆಲವು ಯಂತ್ರಗಳಲ್ಲಿ ತಾಂತ್ರಿಕ ದೋಷವುಂಟಾಗಿತ್ತು. ಆದರೆ ಅದನ್ನು ಅಲ್ಲಿನ ಸಿಬ್ಬಂದಿ ಗಮನಿಸಲಿಲ್ಲ. ಈ ತಾಂತ್ರಿಕ ದೋಷವೇ ದೊಡ್ಡಮಟ್ಟದ ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿದ್ದಾಗಿ ನ್ಯೂಸ್ ಏಜೆನ್ಸಿ ಹೇಳಿದೆ.  

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ. ದುರಂತ ನಡೆದ ತಕ್ಷಣ 170 ತುರ್ತುಪರಿಸ್ಥಿತಿ ಕಾರ್ಯಕರ್ತರು, 50 ರಕ್ಷಣಾ ವಾಹನಗಳು, ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮೊದಲು ಏಳು ಜನರ ಶವ ಪತ್ತೆಯಾಗಿ, 9 ಮಂದಿ ನಾಪತ್ತೆಯಾಗಿದ್ದರು. ಆದರೆ ಒಂದು ತಾಸುಗಳ ಬಳಿಕ ಅಷ್ಟೂ ಮಂದಿಯ ಮೃತದೇಹ ಸಿಕ್ಕಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್ ಪುತ್ರಿ ಸುಹಾನಾರಂತೆಯೇ ಇರುವ ಈ ಯುವತಿ ಯಾರು?; ನೆಟ್ಟಿಗರ ಕುತೂಹಲಕ್ಕೆ ಇಲ್ಲಿದೆ ಉತ್ತರ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ