AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ
ರಷ್ಯಾ ಕಾರ್ಖಾನೆ ಸ್ಫೋಟ
TV9 Web
| Edited By: |

Updated on: Oct 22, 2021 | 3:57 PM

Share

ರಷ್ಯಾದ ಪಶ್ಚಿಮ ರಿಯಾಜಾನ್​ ಪ್ರಾಂತ್ಯದಲ್ಲಿರುವ ಒಂದು ಗನ್​ಪೌಡರ್​ (ರಾಕೆಟ್​, ಗನ್​, ಗ್ರೆನೇಡ್​ ಇತ್ಯಾದಿ ಸಾಧನಗಳಲ್ಲಿ ಬಳಸುವ ರಾಸಾಯನಿಕ ಸ್ಫೋಟಕ ಪುಡಿ) ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಟಿಎಎಸ್​ಎಸ್​ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಕೆಲವು ಯಂತ್ರಗಳಲ್ಲಿ ತಾಂತ್ರಿಕ ದೋಷವುಂಟಾಗಿತ್ತು. ಆದರೆ ಅದನ್ನು ಅಲ್ಲಿನ ಸಿಬ್ಬಂದಿ ಗಮನಿಸಲಿಲ್ಲ. ಈ ತಾಂತ್ರಿಕ ದೋಷವೇ ದೊಡ್ಡಮಟ್ಟದ ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿದ್ದಾಗಿ ನ್ಯೂಸ್ ಏಜೆನ್ಸಿ ಹೇಳಿದೆ.  

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ. ದುರಂತ ನಡೆದ ತಕ್ಷಣ 170 ತುರ್ತುಪರಿಸ್ಥಿತಿ ಕಾರ್ಯಕರ್ತರು, 50 ರಕ್ಷಣಾ ವಾಹನಗಳು, ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮೊದಲು ಏಳು ಜನರ ಶವ ಪತ್ತೆಯಾಗಿ, 9 ಮಂದಿ ನಾಪತ್ತೆಯಾಗಿದ್ದರು. ಆದರೆ ಒಂದು ತಾಸುಗಳ ಬಳಿಕ ಅಷ್ಟೂ ಮಂದಿಯ ಮೃತದೇಹ ಸಿಕ್ಕಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್ ಪುತ್ರಿ ಸುಹಾನಾರಂತೆಯೇ ಇರುವ ಈ ಯುವತಿ ಯಾರು?; ನೆಟ್ಟಿಗರ ಕುತೂಹಲಕ್ಕೆ ಇಲ್ಲಿದೆ ಉತ್ತರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ