AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ
ರಷ್ಯಾ ಕಾರ್ಖಾನೆ ಸ್ಫೋಟ
TV9 Web
| Updated By: Lakshmi Hegde|

Updated on: Oct 22, 2021 | 3:57 PM

Share

ರಷ್ಯಾದ ಪಶ್ಚಿಮ ರಿಯಾಜಾನ್​ ಪ್ರಾಂತ್ಯದಲ್ಲಿರುವ ಒಂದು ಗನ್​ಪೌಡರ್​ (ರಾಕೆಟ್​, ಗನ್​, ಗ್ರೆನೇಡ್​ ಇತ್ಯಾದಿ ಸಾಧನಗಳಲ್ಲಿ ಬಳಸುವ ರಾಸಾಯನಿಕ ಸ್ಫೋಟಕ ಪುಡಿ) ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಟಿಎಎಸ್​ಎಸ್​ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಕೆಲವು ಯಂತ್ರಗಳಲ್ಲಿ ತಾಂತ್ರಿಕ ದೋಷವುಂಟಾಗಿತ್ತು. ಆದರೆ ಅದನ್ನು ಅಲ್ಲಿನ ಸಿಬ್ಬಂದಿ ಗಮನಿಸಲಿಲ್ಲ. ಈ ತಾಂತ್ರಿಕ ದೋಷವೇ ದೊಡ್ಡಮಟ್ಟದ ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿದ್ದಾಗಿ ನ್ಯೂಸ್ ಏಜೆನ್ಸಿ ಹೇಳಿದೆ.  

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ. ದುರಂತ ನಡೆದ ತಕ್ಷಣ 170 ತುರ್ತುಪರಿಸ್ಥಿತಿ ಕಾರ್ಯಕರ್ತರು, 50 ರಕ್ಷಣಾ ವಾಹನಗಳು, ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮೊದಲು ಏಳು ಜನರ ಶವ ಪತ್ತೆಯಾಗಿ, 9 ಮಂದಿ ನಾಪತ್ತೆಯಾಗಿದ್ದರು. ಆದರೆ ಒಂದು ತಾಸುಗಳ ಬಳಿಕ ಅಷ್ಟೂ ಮಂದಿಯ ಮೃತದೇಹ ಸಿಕ್ಕಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್ ಪುತ್ರಿ ಸುಹಾನಾರಂತೆಯೇ ಇರುವ ಈ ಯುವತಿ ಯಾರು?; ನೆಟ್ಟಿಗರ ಕುತೂಹಲಕ್ಕೆ ಇಲ್ಲಿದೆ ಉತ್ತರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ