AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಮೆಟ್ರೋ ಮೇಲ್ಸೇತುವೆ ಕುಸಿತ
Lakshmi Hegde
|

Updated on:May 04, 2021 | 4:03 PM

Share

ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ. ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್​ ಕ್ಲೌಡಿಯಾ ಶೀನ್​ಬಾಮ್​, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್​ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಈ ದುರಂತ ನಡೆದಿದ್ದು ಮೆಟ್ರೋ ಲೈನ್ 12ರಲ್ಲಿ. ಈ ಮೇಲ್ಸೇತುವೆಯನ್ನು 10ವರ್ಷದ ಹಿಂದೆಯೇ ಕಟ್ಟಿಸಲಾಗಿತ್ತು. ಆ ಸಮಯದಲ್ಲಿ ಈಗಿನ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಸೆಲೊ ಎಬ್ರಾರ್ಡ್ ಅವರು ಮೆಕ್ಸಿಕೋ ಸಿಟಿಯ ಮೇಯರ್ ಆಗಿದ್ದರು. ಇಂದು ದುರಂತ ನಡೆದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ

Published On - 3:34 pm, Tue, 4 May 21

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?