AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಮೆಟ್ರೋ ಮೇಲ್ಸೇತುವೆ ಕುಸಿತ
Lakshmi Hegde
|

Updated on:May 04, 2021 | 4:03 PM

Share

ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ. ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್​ ಕ್ಲೌಡಿಯಾ ಶೀನ್​ಬಾಮ್​, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್​ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಈ ದುರಂತ ನಡೆದಿದ್ದು ಮೆಟ್ರೋ ಲೈನ್ 12ರಲ್ಲಿ. ಈ ಮೇಲ್ಸೇತುವೆಯನ್ನು 10ವರ್ಷದ ಹಿಂದೆಯೇ ಕಟ್ಟಿಸಲಾಗಿತ್ತು. ಆ ಸಮಯದಲ್ಲಿ ಈಗಿನ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಸೆಲೊ ಎಬ್ರಾರ್ಡ್ ಅವರು ಮೆಕ್ಸಿಕೋ ಸಿಟಿಯ ಮೇಯರ್ ಆಗಿದ್ದರು. ಇಂದು ದುರಂತ ನಡೆದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ

Published On - 3:34 pm, Tue, 4 May 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು