AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಮೆಟ್ರೋ ಮೇಲ್ಸೇತುವೆ ಕುಸಿತ
Lakshmi Hegde
|

Updated on:May 04, 2021 | 4:03 PM

Share

ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ. ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್​ ಕ್ಲೌಡಿಯಾ ಶೀನ್​ಬಾಮ್​, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್​ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಈ ದುರಂತ ನಡೆದಿದ್ದು ಮೆಟ್ರೋ ಲೈನ್ 12ರಲ್ಲಿ. ಈ ಮೇಲ್ಸೇತುವೆಯನ್ನು 10ವರ್ಷದ ಹಿಂದೆಯೇ ಕಟ್ಟಿಸಲಾಗಿತ್ತು. ಆ ಸಮಯದಲ್ಲಿ ಈಗಿನ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಸೆಲೊ ಎಬ್ರಾರ್ಡ್ ಅವರು ಮೆಕ್ಸಿಕೋ ಸಿಟಿಯ ಮೇಯರ್ ಆಗಿದ್ದರು. ಇಂದು ದುರಂತ ನಡೆದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ

Published On - 3:34 pm, Tue, 4 May 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!