AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಮೆಟ್ರೋ ಮೇಲ್ಸೇತುವೆ ಕುಸಿತ
Lakshmi Hegde
|

Updated on:May 04, 2021 | 4:03 PM

Share

ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್​​ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ. ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್​ ಕ್ಲೌಡಿಯಾ ಶೀನ್​ಬಾಮ್​, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್​ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಈ ದುರಂತ ನಡೆದಿದ್ದು ಮೆಟ್ರೋ ಲೈನ್ 12ರಲ್ಲಿ. ಈ ಮೇಲ್ಸೇತುವೆಯನ್ನು 10ವರ್ಷದ ಹಿಂದೆಯೇ ಕಟ್ಟಿಸಲಾಗಿತ್ತು. ಆ ಸಮಯದಲ್ಲಿ ಈಗಿನ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಸೆಲೊ ಎಬ್ರಾರ್ಡ್ ಅವರು ಮೆಕ್ಸಿಕೋ ಸಿಟಿಯ ಮೇಯರ್ ಆಗಿದ್ದರು. ಇಂದು ದುರಂತ ನಡೆದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ

Published On - 3:34 pm, Tue, 4 May 21

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್