AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ಗೆ ಅಗೌರವ ತೋರಿದ ಆರೋಪ, ಪಾಕ್​ನಲ್ಲಿ ಪ್ರವಾಸಿಗರೊಬ್ಬರ ಸಜೀವದಹನ

ಕುರಾನ್​ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಥಳಿಸಿ, ಜೀವಂತ ಸುಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಕುರಾನ್​ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ ಮೇಲೆ ಕೋಪಗೊಂಡ ಜನರು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಅಂತಿಮವಾಗಿ ಸಜೀವದಹನ ಮಾಡಿದೆ.

ಕುರಾನ್​ಗೆ ಅಗೌರವ ತೋರಿದ ಆರೋಪ, ಪಾಕ್​ನಲ್ಲಿ ಪ್ರವಾಸಿಗರೊಬ್ಬರ ಸಜೀವದಹನ
ಪಾಕಿಸ್ತಾನ ಬೆಂಕಿ ವ್ಯಕ್ತಿಯ ದಹನ
ನಯನಾ ರಾಜೀವ್
|

Updated on:May 27, 2025 | 9:18 AM

Share

ಇಸ್ಲಾಮಾಬಾದ್, ಮೇ 27: ಕುರಾನ್(Quran)​ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ ಮೇಲೆ ಕೋಪಗೊಂಡ ಜನರು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಅಂತಿಮವಾಗಿ ಸಜೀವದಹನ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆ ಗುಂಪಿನಲ್ಲಿ ಹಂತಕರು ಕೂಡ ಇದ್ದರು, ಹಗಲಿನಲ್ಲಿಯೇ ಅಮಾಯಕರೊಬ್ಬರ ಹತ್ಯೆ ಜನರಲ್ಲಿ ಭಯವನ್ನು ಹುಟ್ಟುಹಾಕಿದೆ. ಪಾಕಿಸ್ತಾನದಲ್ಲಿ ಧರ್ಮನಿಂದನೆಯ ಕಾನೂನು ವಿಶ್ವದ ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದು. ಇವುಗಳನ್ನು ಅಲ್ಪಸಂಖ್ಯಾತರು, ರಾಜಕೀಯ ವಿರೋಧಿಗಳು ಅಥವಾ ವಿದೇಶಿಯರ ವಿರುದ್ಧ ಹೆಚ್ಚಾಗಿ ಬಳಸುತ್ತಾರೆ.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಕೆಲವೊಮ್ಮೆ ವಿಶ್ವಾಸಾರ್ಹ ಪುರಾವೆಗಳಿಲ್ಲದೆ, ಕೇವಲ ಆರೋಪಗಳು ಬಂದಿದ್ದರೂ, ನಂತರ ಸುಳ್ಳು ಎಂದು ಸಾಬೀತಾದರೂ ಈ ಕಾನೂನು ಬಳಕೆ ಮಾಡುತ್ತಾರೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆ ಮತ್ತು ವಿದೇಶಿ ಸರ್ಕಾರಗಳು ಈ ದಾಳಿಯನ್ನು ಖಂಡಿಸಿವೆ.

ಎರಡು ವರ್ಷಗಳ ಹಿಂದೆ ಪಾಕಿಸ್ತಾನದಲ್ಲಿ ಕುರಾನ್​ಗೆ ಬೆಂಕಿ ಹೆಚ್ಚಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಖಾನೆವಾಲ್‌ ಜಿಲ್ಲೆ ಜಂಗಲ್‌ ಡೇರಾವಾಲಾ ಗ್ರಾಮದ ಬಳಿ ಹಲವು ಮುಸ್ಲಿಮರು ಪ್ರಾರ್ಥನೆ ಮಾಡುವಾಗ ಬಾರಾ ಚಾಕ್‌ ಗ್ರಾಮದ ಮುಷ್ತಾಕ್‌ ಅಹ್ಮದ್‌ ಎಂಬ ವ್ಯಕ್ತಿಯು ಕುರಾನ್‌ ಹರಿದುಹಾಕಿ, ಅದರ ಹಾಳೆಗಳನ್ನು ಸುಟ್ಟುಹಾಕಿದ್ದ.

ಕುರಾನ್‌ ಸುಟ್ಟಿರುವ ಸುದ್ದಿ ಹರಡುತ್ತಲೇ ನೂರಾರು ಮುಸ್ಲಿಮರು ಒಗ್ಗೂಡಿ ವ್ಯಕ್ತಿಯನ್ನು ಮೊದಲು ಮರಕ್ಕೆ ಕಟ್ಟಿಹಾಕಿದ್ದಾರೆ. ಎಲ್ಲರೂ ಆತನಿಗೆ ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಶಂಕಿತ ತಾನು ನಿರಪರಾಧಿಯೆಂದು ಹೇಳುತ್ತಿದ್ದರೂ ಮಾತುಗಳನ್ನೂ ಆಲಿಸಿಕೊಳ್ಳದೇ ಮರಕ್ಕೆ ನೇತುಹಾಕಿ ಆತನನ್ನು ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಡಾನ್ ಪತ್ರಿಕೆ ವರದಿ ಪ್ರಕಟಿಸಿದೆ.

ಮತ್ತಷ್ಟು ಓದಿ: ಕುರಾನ್​ಗೆ ಅವಮಾನ ಆರೋಪ, ಪೊಲೀಸ್​ ಠಾಣೆ ಎದುರೇ ವ್ಯಕ್ತಿಯನ್ನು ಜೀವಂತವಾಗಿ ದಹಿಸಿದ ಜನರು

ಸಾರ್ವಜನಿಕರೇ ಕಾನೂನನ್ನು ಕೈಗೆತ್ತಿಕೊಂಡು ಆರೋಪಿಗಳನ್ನು ಹತ್ಯೆ ಮಾಡುತ್ತಿರುವ ಘಟನೆ ಪಾಕಿಸ್ತಾನದಲ್ಲಿ ಇದು ಮೊದಲಲ್ಲ. ಇದೇ ರೀತಿಯ ಘಟನೆ ಕಳೆದ ನವೆಂಬರ್ ತಿಂಗಳಲ್ಲಿ ಖೈಬರ್ ಪಖ್ತುಂಕ್ವಾದಲ್ಲಿ ನಡೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 am, Tue, 27 May 25

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು