AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ಗೆ ಅಗೌರವ ತೋರಿದ ಆರೋಪ, ಪಾಕ್​ನಲ್ಲಿ ಪ್ರವಾಸಿಗರೊಬ್ಬರ ಸಜೀವದಹನ

ಕುರಾನ್​ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಥಳಿಸಿ, ಜೀವಂತ ಸುಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಕುರಾನ್​ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ ಮೇಲೆ ಕೋಪಗೊಂಡ ಜನರು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಅಂತಿಮವಾಗಿ ಸಜೀವದಹನ ಮಾಡಿದೆ.

ಕುರಾನ್​ಗೆ ಅಗೌರವ ತೋರಿದ ಆರೋಪ, ಪಾಕ್​ನಲ್ಲಿ ಪ್ರವಾಸಿಗರೊಬ್ಬರ ಸಜೀವದಹನ
ಪಾಕಿಸ್ತಾನ ಬೆಂಕಿ ವ್ಯಕ್ತಿಯ ದಹನ
ನಯನಾ ರಾಜೀವ್
|

Updated on:May 27, 2025 | 9:18 AM

Share

ಇಸ್ಲಾಮಾಬಾದ್, ಮೇ 27: ಕುರಾನ್(Quran)​ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ ಮೇಲೆ ಕೋಪಗೊಂಡ ಜನರು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಅಂತಿಮವಾಗಿ ಸಜೀವದಹನ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆ ಗುಂಪಿನಲ್ಲಿ ಹಂತಕರು ಕೂಡ ಇದ್ದರು, ಹಗಲಿನಲ್ಲಿಯೇ ಅಮಾಯಕರೊಬ್ಬರ ಹತ್ಯೆ ಜನರಲ್ಲಿ ಭಯವನ್ನು ಹುಟ್ಟುಹಾಕಿದೆ. ಪಾಕಿಸ್ತಾನದಲ್ಲಿ ಧರ್ಮನಿಂದನೆಯ ಕಾನೂನು ವಿಶ್ವದ ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದು. ಇವುಗಳನ್ನು ಅಲ್ಪಸಂಖ್ಯಾತರು, ರಾಜಕೀಯ ವಿರೋಧಿಗಳು ಅಥವಾ ವಿದೇಶಿಯರ ವಿರುದ್ಧ ಹೆಚ್ಚಾಗಿ ಬಳಸುತ್ತಾರೆ.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಕೆಲವೊಮ್ಮೆ ವಿಶ್ವಾಸಾರ್ಹ ಪುರಾವೆಗಳಿಲ್ಲದೆ, ಕೇವಲ ಆರೋಪಗಳು ಬಂದಿದ್ದರೂ, ನಂತರ ಸುಳ್ಳು ಎಂದು ಸಾಬೀತಾದರೂ ಈ ಕಾನೂನು ಬಳಕೆ ಮಾಡುತ್ತಾರೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆ ಮತ್ತು ವಿದೇಶಿ ಸರ್ಕಾರಗಳು ಈ ದಾಳಿಯನ್ನು ಖಂಡಿಸಿವೆ.

ಎರಡು ವರ್ಷಗಳ ಹಿಂದೆ ಪಾಕಿಸ್ತಾನದಲ್ಲಿ ಕುರಾನ್​ಗೆ ಬೆಂಕಿ ಹೆಚ್ಚಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಖಾನೆವಾಲ್‌ ಜಿಲ್ಲೆ ಜಂಗಲ್‌ ಡೇರಾವಾಲಾ ಗ್ರಾಮದ ಬಳಿ ಹಲವು ಮುಸ್ಲಿಮರು ಪ್ರಾರ್ಥನೆ ಮಾಡುವಾಗ ಬಾರಾ ಚಾಕ್‌ ಗ್ರಾಮದ ಮುಷ್ತಾಕ್‌ ಅಹ್ಮದ್‌ ಎಂಬ ವ್ಯಕ್ತಿಯು ಕುರಾನ್‌ ಹರಿದುಹಾಕಿ, ಅದರ ಹಾಳೆಗಳನ್ನು ಸುಟ್ಟುಹಾಕಿದ್ದ.

ಕುರಾನ್‌ ಸುಟ್ಟಿರುವ ಸುದ್ದಿ ಹರಡುತ್ತಲೇ ನೂರಾರು ಮುಸ್ಲಿಮರು ಒಗ್ಗೂಡಿ ವ್ಯಕ್ತಿಯನ್ನು ಮೊದಲು ಮರಕ್ಕೆ ಕಟ್ಟಿಹಾಕಿದ್ದಾರೆ. ಎಲ್ಲರೂ ಆತನಿಗೆ ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಶಂಕಿತ ತಾನು ನಿರಪರಾಧಿಯೆಂದು ಹೇಳುತ್ತಿದ್ದರೂ ಮಾತುಗಳನ್ನೂ ಆಲಿಸಿಕೊಳ್ಳದೇ ಮರಕ್ಕೆ ನೇತುಹಾಕಿ ಆತನನ್ನು ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಡಾನ್ ಪತ್ರಿಕೆ ವರದಿ ಪ್ರಕಟಿಸಿದೆ.

ಮತ್ತಷ್ಟು ಓದಿ: ಕುರಾನ್​ಗೆ ಅವಮಾನ ಆರೋಪ, ಪೊಲೀಸ್​ ಠಾಣೆ ಎದುರೇ ವ್ಯಕ್ತಿಯನ್ನು ಜೀವಂತವಾಗಿ ದಹಿಸಿದ ಜನರು

ಸಾರ್ವಜನಿಕರೇ ಕಾನೂನನ್ನು ಕೈಗೆತ್ತಿಕೊಂಡು ಆರೋಪಿಗಳನ್ನು ಹತ್ಯೆ ಮಾಡುತ್ತಿರುವ ಘಟನೆ ಪಾಕಿಸ್ತಾನದಲ್ಲಿ ಇದು ಮೊದಲಲ್ಲ. ಇದೇ ರೀತಿಯ ಘಟನೆ ಕಳೆದ ನವೆಂಬರ್ ತಿಂಗಳಲ್ಲಿ ಖೈಬರ್ ಪಖ್ತುಂಕ್ವಾದಲ್ಲಿ ನಡೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 am, Tue, 27 May 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು