AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ

ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ನರೇಂದ್ರ ಮೋದಿ-ಪುಟಿನ್Image Credit source: Zee Business
ನಯನಾ ರಾಜೀವ್
|

Updated on: Oct 05, 2023 | 8:25 AM

Share

ಮಾಸ್ಕೋ, ಅಕ್ಟೋಬರ್ 05: ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ. ಅವರು ಬಹಳ ಬುದ್ಧಿವಂತ ವ್ಯಕ್ತಿ. ಅವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ.

ಆರ್ಥಿಕ ಭದ್ರತೆ ಮತ್ತು ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ರಷ್ಯಾ ಮತ್ತು ಭಾರತದ ನಡುವೆ ಸಹಕಾರದ ಭರವಸೆಯನ್ನು ಪುಟಿನ್ ವ್ಯಕ್ತಪಡಿಸಿದರು. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸದ ಇಬ್ಬರು ವಿಶ್ವ ನಾಯಕರಲ್ಲಿ ಪುಟಿನ್ ಒಬ್ಬರು.

ಭಾರತವು ಪ್ರಭಾವಿ ಗುಂಪಿನ ಶೃಂಗಸಭೆಯನ್ನು ನವದೆಹಲಿಯಲ್ಲಿ ಆಯೋಜಿಸಿತ್ತು, ಇದರಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಉನ್ನತ ಜಾಗತಿಕ ನಾಯಕರು ಭಾಗವಹಿಸಿದ್ದರು.

ಮತ್ತಷ್ಟು ಓದಿ: ರಾಜತಾಂತ್ರಿಕ ವಿವಾದ ಬಗೆಹರಿಸಲು ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಕೆನಡಾ

ಜೂನ್‌ನಲ್ಲಿ ಪುಟಿನ್ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಶ್ಲಾಘಿಸಿದ್ದರು ಮತ್ತು ಪ್ರಧಾನಿ ಮೋದಿಯನ್ನು ರಷ್ಯಾದ ಸ್ನೇಹಿತ ಎಂದು ಕರೆದಿದ್ದರು. ಕಳೆದ ವರ್ಷ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆಯ ಮೂಲಕ ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು ಮತ್ತು ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!