AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 23, 2021 | 1:04 PM

Share

ಜನರನ್ನು ಹೆದರಿಸಲು ದೆವ್ವದಂತೆ ವೇಷ ಹಾಕಿಕೊಂಡು, ಖಾಲಿ ರಸ್ತೆಯಲ್ಲಿ ತಿರುಗುತ್ತಿದ್ದ ಯುವತಿಯೊಬ್ಬಳು ವ್ಯಕ್ತಿಯ ಗುಂಡೇಟಿಗೆ ಬಲಿಯಾಗಿದ್ದಾಳೆ. ಈಕೆ 20-25ವರ್ಷದ ಯುವತಿಯಾಗಿದ್ದು, ಬಿಳಿಬಣ್ಣದ ಉಡುಪು ಧರಿಸಿ, ಭಯಾನಕವಾಗಿ ಮೇಕಪ್​ ಮಾಡಿಕೊಂಡು ಥೇಟ್​ ದೆವ್ವದಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದಳು. ಅನೇಕರು ಇವಳನ್ನು ನೋಡಿ ಭಯಬಿದ್ದಿದ್ದಾರೆ. ಆದರೆ ವ್ಯಕ್ತಿಯೊಬ್ಬರ ಗುಂಡು ಹಾರಿಸಿ ಅವಳನ್ನು ಹತ್ಯೆ ಮಾಡಿದ್ದಾನೆ.

ಮೆಕ್ಸಿಕೋದ ನೌಕ್‌ಚೋಟ್ ಡಿ ಜುವಾರೆಜ್‌ದಲ್ಲಿ ಘಟನೆ ನಡೆದಿದೆ. ಈ ಯುವತಿಯನ್ನು ಗುರುತಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈಕೆ ಲ್ಯಾಟಿನ್​ ಅಮೆರಿಕಾದಲ್ಲಿ ಹೆಸರಾದ ದೆವ್ಚ ಲಾ ಲೊರೊನಾಳಂತೆ ಉಡುಪು ಧರಿಸುತ್ತಿದ್ದಳು.  (ಲಾ ಲೊರೊನಾ ಎಂದರೆ ಸತ್ತುಹೋದ ತನ್ನ ಮಕ್ಕಳನ್ನು ಅರಸುತ್ತ ಬೀದಿಯಲ್ಲಿ ಅಲೆದಾಡುವ ದೆವ್ವ ಎಂದು ಲ್ಯಾಟಿನ್​ ಅಮೆರಿಕ ಜನರ ನಂಬಿಕೆ). ಈ ಯುವತಿ ಕೂಟ ಅಕ್ಟೋಬರ್​ 15ರಂದು ಓ ನನ್ನ ಮಕ್ಕಳೇ ಎಂದು ಬೀದಿಯಲ್ಲಿ ತಿರುಗುತ್ತಿರುವುದನ್ನು ನೋಡಿದ್ದೇವೆ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು. ಅದನ್ನು ವ್ಯಕ್ತಿಯೊಬ್ಬ ಚಿತ್ರೀಕರಣ ಕೂಡ ಮಾಡಿದ್ದಾನೆ. ಆದರೆ ಅದಾದ ಕೆಲವೇ ಹೊತ್ತಲ್ಲಿ ಶೂಟರ್​ ಆಕೆಯನ್ನು ಗುಂಡುಹೊಡೆದು ಸಾಯಿಸಿದ್ದಾನೆ. ಕೃತ್ಯ ಎಸಗಿದ ಬಳಿಕ ಅವನು ಪರಾರಿಯಾಗಿದ್ದಾನೆ. ಸದ್ಯ ಆ ಯುವತಿ ಯಾರೆಂದೂ ಪೊಲೀಸರಿಗೆ ಗೊತ್ತಾಗುತ್ತಿಲ್ಲ ಮತ್ತು ಗುಂಡು ಹೊಡೆದವನು ಯಾರೆಂದೂ ತಿಳಿಯುತ್ತಿಲ್ಲ ಎನ್ನಲಾಗಿದ್ದು, ಯಾರನ್ನೂ ಇಲ್ಲಿಯವರೆಗೂ ಬಂಧಿಸಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

Published On - 1:02 pm, Sat, 23 October 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ