AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 23, 2021 | 1:04 PM

Share

ಜನರನ್ನು ಹೆದರಿಸಲು ದೆವ್ವದಂತೆ ವೇಷ ಹಾಕಿಕೊಂಡು, ಖಾಲಿ ರಸ್ತೆಯಲ್ಲಿ ತಿರುಗುತ್ತಿದ್ದ ಯುವತಿಯೊಬ್ಬಳು ವ್ಯಕ್ತಿಯ ಗುಂಡೇಟಿಗೆ ಬಲಿಯಾಗಿದ್ದಾಳೆ. ಈಕೆ 20-25ವರ್ಷದ ಯುವತಿಯಾಗಿದ್ದು, ಬಿಳಿಬಣ್ಣದ ಉಡುಪು ಧರಿಸಿ, ಭಯಾನಕವಾಗಿ ಮೇಕಪ್​ ಮಾಡಿಕೊಂಡು ಥೇಟ್​ ದೆವ್ವದಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದಳು. ಅನೇಕರು ಇವಳನ್ನು ನೋಡಿ ಭಯಬಿದ್ದಿದ್ದಾರೆ. ಆದರೆ ವ್ಯಕ್ತಿಯೊಬ್ಬರ ಗುಂಡು ಹಾರಿಸಿ ಅವಳನ್ನು ಹತ್ಯೆ ಮಾಡಿದ್ದಾನೆ.

ಮೆಕ್ಸಿಕೋದ ನೌಕ್‌ಚೋಟ್ ಡಿ ಜುವಾರೆಜ್‌ದಲ್ಲಿ ಘಟನೆ ನಡೆದಿದೆ. ಈ ಯುವತಿಯನ್ನು ಗುರುತಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈಕೆ ಲ್ಯಾಟಿನ್​ ಅಮೆರಿಕಾದಲ್ಲಿ ಹೆಸರಾದ ದೆವ್ಚ ಲಾ ಲೊರೊನಾಳಂತೆ ಉಡುಪು ಧರಿಸುತ್ತಿದ್ದಳು.  (ಲಾ ಲೊರೊನಾ ಎಂದರೆ ಸತ್ತುಹೋದ ತನ್ನ ಮಕ್ಕಳನ್ನು ಅರಸುತ್ತ ಬೀದಿಯಲ್ಲಿ ಅಲೆದಾಡುವ ದೆವ್ವ ಎಂದು ಲ್ಯಾಟಿನ್​ ಅಮೆರಿಕ ಜನರ ನಂಬಿಕೆ). ಈ ಯುವತಿ ಕೂಟ ಅಕ್ಟೋಬರ್​ 15ರಂದು ಓ ನನ್ನ ಮಕ್ಕಳೇ ಎಂದು ಬೀದಿಯಲ್ಲಿ ತಿರುಗುತ್ತಿರುವುದನ್ನು ನೋಡಿದ್ದೇವೆ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು. ಅದನ್ನು ವ್ಯಕ್ತಿಯೊಬ್ಬ ಚಿತ್ರೀಕರಣ ಕೂಡ ಮಾಡಿದ್ದಾನೆ. ಆದರೆ ಅದಾದ ಕೆಲವೇ ಹೊತ್ತಲ್ಲಿ ಶೂಟರ್​ ಆಕೆಯನ್ನು ಗುಂಡುಹೊಡೆದು ಸಾಯಿಸಿದ್ದಾನೆ. ಕೃತ್ಯ ಎಸಗಿದ ಬಳಿಕ ಅವನು ಪರಾರಿಯಾಗಿದ್ದಾನೆ. ಸದ್ಯ ಆ ಯುವತಿ ಯಾರೆಂದೂ ಪೊಲೀಸರಿಗೆ ಗೊತ್ತಾಗುತ್ತಿಲ್ಲ ಮತ್ತು ಗುಂಡು ಹೊಡೆದವನು ಯಾರೆಂದೂ ತಿಳಿಯುತ್ತಿಲ್ಲ ಎನ್ನಲಾಗಿದ್ದು, ಯಾರನ್ನೂ ಇಲ್ಲಿಯವರೆಗೂ ಬಂಧಿಸಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

Published On - 1:02 pm, Sat, 23 October 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!