AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು.

ಬೀದಿಬೀದಿ ಅಲೆಯುತ್ತಿದ್ದ ಹೆಣ್ಣು ದೆವ್ವಕ್ಕೆ ಗುಂಡು ಹೊಡೆದು ಕೊಂದ ವ್ಯಕ್ತಿ !; ತಲೆ ಕೆಡಿಸಿಕೊಂಡ ಪೊಲೀಸರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Oct 23, 2021 | 1:04 PM

ಜನರನ್ನು ಹೆದರಿಸಲು ದೆವ್ವದಂತೆ ವೇಷ ಹಾಕಿಕೊಂಡು, ಖಾಲಿ ರಸ್ತೆಯಲ್ಲಿ ತಿರುಗುತ್ತಿದ್ದ ಯುವತಿಯೊಬ್ಬಳು ವ್ಯಕ್ತಿಯ ಗುಂಡೇಟಿಗೆ ಬಲಿಯಾಗಿದ್ದಾಳೆ. ಈಕೆ 20-25ವರ್ಷದ ಯುವತಿಯಾಗಿದ್ದು, ಬಿಳಿಬಣ್ಣದ ಉಡುಪು ಧರಿಸಿ, ಭಯಾನಕವಾಗಿ ಮೇಕಪ್​ ಮಾಡಿಕೊಂಡು ಥೇಟ್​ ದೆವ್ವದಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದಳು. ಅನೇಕರು ಇವಳನ್ನು ನೋಡಿ ಭಯಬಿದ್ದಿದ್ದಾರೆ. ಆದರೆ ವ್ಯಕ್ತಿಯೊಬ್ಬರ ಗುಂಡು ಹಾರಿಸಿ ಅವಳನ್ನು ಹತ್ಯೆ ಮಾಡಿದ್ದಾನೆ.

ಮೆಕ್ಸಿಕೋದ ನೌಕ್‌ಚೋಟ್ ಡಿ ಜುವಾರೆಜ್‌ದಲ್ಲಿ ಘಟನೆ ನಡೆದಿದೆ. ಈ ಯುವತಿಯನ್ನು ಗುರುತಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈಕೆ ಲ್ಯಾಟಿನ್​ ಅಮೆರಿಕಾದಲ್ಲಿ ಹೆಸರಾದ ದೆವ್ಚ ಲಾ ಲೊರೊನಾಳಂತೆ ಉಡುಪು ಧರಿಸುತ್ತಿದ್ದಳು.  (ಲಾ ಲೊರೊನಾ ಎಂದರೆ ಸತ್ತುಹೋದ ತನ್ನ ಮಕ್ಕಳನ್ನು ಅರಸುತ್ತ ಬೀದಿಯಲ್ಲಿ ಅಲೆದಾಡುವ ದೆವ್ವ ಎಂದು ಲ್ಯಾಟಿನ್​ ಅಮೆರಿಕ ಜನರ ನಂಬಿಕೆ). ಈ ಯುವತಿ ಕೂಟ ಅಕ್ಟೋಬರ್​ 15ರಂದು ಓ ನನ್ನ ಮಕ್ಕಳೇ ಎಂದು ಬೀದಿಯಲ್ಲಿ ತಿರುಗುತ್ತಿರುವುದನ್ನು ನೋಡಿದ್ದೇವೆ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಘಟನೆ ನಡೆದದ್ದು ಅಕ್ಟೋಬರ್​ 15ರಂದು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಕೂಡ ಯುವತಿ ಬಿಳಿಬಣ್ಣದ ನಿಲುವಂಗಿ ಧರಿಸಿ, ಭಯಾನಕವಾಗಿ ಮುಖಕ್ಕೆಲ್ಲ ಬಣ್ಣಬಳಿದುಕೊಂಡು ಕೂಗುತ್ತ ಓಡಾಡುತ್ತಿದ್ದಳು. ಅದನ್ನು ವ್ಯಕ್ತಿಯೊಬ್ಬ ಚಿತ್ರೀಕರಣ ಕೂಡ ಮಾಡಿದ್ದಾನೆ. ಆದರೆ ಅದಾದ ಕೆಲವೇ ಹೊತ್ತಲ್ಲಿ ಶೂಟರ್​ ಆಕೆಯನ್ನು ಗುಂಡುಹೊಡೆದು ಸಾಯಿಸಿದ್ದಾನೆ. ಕೃತ್ಯ ಎಸಗಿದ ಬಳಿಕ ಅವನು ಪರಾರಿಯಾಗಿದ್ದಾನೆ. ಸದ್ಯ ಆ ಯುವತಿ ಯಾರೆಂದೂ ಪೊಲೀಸರಿಗೆ ಗೊತ್ತಾಗುತ್ತಿಲ್ಲ ಮತ್ತು ಗುಂಡು ಹೊಡೆದವನು ಯಾರೆಂದೂ ತಿಳಿಯುತ್ತಿಲ್ಲ ಎನ್ನಲಾಗಿದ್ದು, ಯಾರನ್ನೂ ಇಲ್ಲಿಯವರೆಗೂ ಬಂಧಿಸಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

Published On - 1:02 pm, Sat, 23 October 21

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ