AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ
ನದಿ
ನಯನಾ ರಾಜೀವ್
|

Updated on: Jan 16, 2024 | 10:15 AM

Share

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್​ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್​ ಆಳದ ನದಿಗೆ ಬಿದ್ದಿದೆ,

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Nepal Accident: ನೇಪಾಳ ರಸ್ತೆ ಅಪಘಾತ, 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ಸಾವು

ಭಾಲುಬಾಂಗ್​ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್​ಗಂಜ್​ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಆದರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು