AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ
ನದಿ
ನಯನಾ ರಾಜೀವ್
|

Updated on: Jan 16, 2024 | 10:15 AM

Share

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್​ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್​ ಆಳದ ನದಿಗೆ ಬಿದ್ದಿದೆ,

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Nepal Accident: ನೇಪಾಳ ರಸ್ತೆ ಅಪಘಾತ, 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ಸಾವು

ಭಾಲುಬಾಂಗ್​ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್​ಗಂಜ್​ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಆದರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ